ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉದ್ಯೋಗ ಆಕಾಂಕ್ಷಿಗಳಿಗೆ ಮಹತ್ವದ ಸುದ್ದಿಯೊಂದನ್ನು ಘೋಷಣೆ ಮಾಡಿದ್ದಾರೆ. ಖಾಲಿ ಇರುವ ಸಹಾಯಕ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲು ಅವರು ಮುಂದಾಗಿದ್ದಾರೆ.
ಸುಮಾರು 31,661 ಅಭ್ಯರ್ಥಿಗಳಿಗೆ ಉದ್ಯೋಗ ದೊರಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅಧಿಸೂಚನೆಯ ಪ್ರಕಾರ, ಸಹಾಯಕ ಶಿಕ್ಷಕರ ನೇಮಕಾತಿಯನ್ನು ವಾರದೊಳಗೆ ನಡೆಸಲಾಗುತ್ತದೆ.
31,661 ಸಹಾಯಕ ಶಿಕ್ಷಕರನ್ನು ವಾರದೊಳಗೆ ನೇಮಕಾತಿಗೊಳಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಲಾಗಿದೆ. ಯುವ ಜನತೆಗೆ ಸಮರ್ಪಕವಾದ ಉದ್ಯೋಗ ಅವಕಾಶವನ್ನು ನೀಡಲು ಸರಕಾರ ಬದ್ಧವಾಗಿದೆ ಎಂದು ಯೋಗಿ ಪುನರುಚ್ಚರಿಸಿದ್ದಾರೆ.
ಸುಮಾರು 69000 ಕಾರ್ಯಗಳಿಗಾಗಿ ಪರೀಕ್ಷೆ ನಡೆಯಲಿದೆ. ಆದರೆ ಇದರಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ 31,661 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಕೊರೋನಾ ಸಂದರ್ಭದಲ್ಲಿ ಯುವಜನತೆ ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂಥಹ ಸಂದರ್ಭದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲು ಯೋಗಿ ಆದಿತ್ಯನಾಥ ಸರ್ಕಾರ ಮುಂದಾಗಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.