ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ವರುಣ ತನ್ನ ಆರ್ಭಟವನ್ನು ಹೆಚ್ಚಿಸಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಕನ್ನಡ, ಕೊಡಗು ಮೊದಲಾದ ಜಿಲ್ಲೆಗಳು ಜಲಾವೃತಗೊಂಡಿದೆ. ಮನೆ ಮಠಗಳಿಗೆ ನೀರು ನುಗ್ಗಿದ್ದು, ಅಲ್ಲಲ್ಲಿ ರಸ್ತೆ ಸಂಚಾರವೂ ಸ್ಥಗಿತಗೊಂಡಿದೆ. ಒಟ್ಟಾರೆಯಾಗಿ ಮಳೆಯಿಂದಾಗಿ ಉಡುಪಿ, ಮಂಗಳೂರು ಭಾಗದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಉಡುಪಿ ಜಿಲ್ಲೆಯ ಹೆಚ್ಚಿನ ಪ್ರದೇಶಗಳು ಜಲಹಾನಿಗೆ ತುತ್ತಾಗಿವೆ. ವರುಣನ ರುದ್ರ ನರ್ತನಕ್ಕೆ ಕೃಷ್ಣ ಮಠದೊಳಕ್ಕೂ ನೀರು ನುಗ್ಗಿದೆ. ಅಲ್ಲದೆ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿದ್ದು, ಅಪಾಯಕ್ಕೆ ಸಿಲುಕಿದವರನ್ನು ಎಸ್ಡಿಆರ್ಎಫ್ ತಂಡ ರಕ್ಷಣೆ ಮಾಡಿರುವುದಾಗಿ ತಿಳಿದು ಬಂದಿದೆ. ಜೊತೆಗೆ ಹೆಚ್ಚಿನ ರಕ್ಷಣಾ ಕಾರ್ಯಕ್ಕೆ ಸೇನಾ ಹೆಲಿಕಾಪ್ಟರ್ ನೀಡುವಂತೆಯೂ ಮನವಿ ಮಾಡಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಜೊತೆಗೆ ಆಗ್ನಿಶಾಮಕ ದಳ, ಕೋಸ್ಟ್ ಗಾರ್ಡ್, ಸ್ಥಳೀಯರು ಸಹ ಅಪಾಯಕ್ಕೆ ಸಿಲುಕಿದಶರ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಜೊತೆಗೆ ಮಳೆಹಾನಿಯಿಂದ ಜನರನ್ನು ರಕ್ಷಣೆ ಮಾಡಲು ಎನ್ಡಿಆರ್ಎಫ್ ಸಹ ಉಡುಪಿಗೆ ನಿನ್ನೆ ತಲುಪಿದೆ. ನೆರೆಯಲ್ಲಿ ಸಿಲುಕಿದ್ದ 700ಕ್ಕೂ ಅಧಿಕ ಕುಟುಂಬಗಳನ್ನು ರಕ್ಷಣೆ ಮಾಡಿದೆ. 1000 ಕ್ಕೂ ಅಧಿಕ ಜನರಿಗೆ ವಾಸ್ತವ್ಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಈ ಸ್ಥಿತಿ ನಿರ್ಮಾಣವಾಗಿದ್ದು, ಸೆ. 23 ರ ವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಸಹ ಘೋಷಿಸಲಾಗಿದೆ. ಉಡುಪಿ, ದ.ಕ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಸ್ನಾತಕೋತ್ತರ ಮತ್ತು ಅಂತಿಮ ಪದವಿಯ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.