ಬೆಂಗಳೂರು: ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಚೇತರಿಸಿಕೊಂಡ ರೋಗಿಗಳ ದೀರ್ಘ ಕಾಲದ ಪರಿಣಾಮಗಳ ಸಂಶೋಧನೆಗೆ ವೈದ್ಯಕೀಯ ತಜ್ಞರ ವಿಶೇಷ ಸಮಿತಿಯನ್ನು ಶೀಘ್ರದಲ್ಲೇ ರಚನೆ ಮಾಡಲಾಗುವುದು ಎಂದು ಸಚಿವ ಡಾ. ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.
ಪ್ರಪಂಚದ ಹೆಚ್ಚಿನ ರಾಷ್ಟ್ರಗಳು ಕೊರೋನಾ ಸಂಬಂಧಿಸಿದಂತೆ ದೀರ್ಘಕಾಲದ ಪರಿಣಾಮಗಳಿಗೆ ಸಂಬಂಧಿಸಿದಂತೆ ಅಧ್ಯಯನ ಮಾಡಲು ಮುಂದಾಗಿವೆ. ಅದರಂತೆ ರಾಜ್ಯದಲ್ಲಿಯೂ ಈ ಸಂಬಂಧ ಪೂರಕ ವ್ಯವಸ್ಥೆಗಳನ್ನು ಮಾಡಲಾಗುತ್ತಿದ್ದು, ಇದಕ್ಕಾಗಿ ಕ್ಲಿನಿಕಲ್ ತಂತ್ರವನ್ನು ತಂಡ ಅಭಿವೃದ್ಧಿ ಮಾಡುತ್ತಿದೆ ಎಂದು ತಿಳಿಸಿದ್ದಾರೆ. ಸೌಮ್ಯ ಮತ್ತು ತೀವ್ರವಾದ ಪ್ರಮಾಣದಲ್ಲಿ ಸೋಂಕಿನ ಲಕ್ಷಣ ಹೊಂದಿರುವವರನ್ನು ಮತ್ತು ಬೇರೆ ರೀತಿಯ ಅಸ್ವಸ್ಥತೆಗೆ ಒಳಗಾದವರನ್ನು ಇದರಲ್ಲಿ ಮೌಲ್ಯಮಾಪನ ಮಾಡಲಾಗುವುದಾಗಿಯೂ ಅವರು ತಿಳಿಸಿದ್ದಾರೆ.
ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ದೀರ್ಘಕಾಲದ ಸಮಸ್ಯೆಗಳ ಬಗ್ಗೆ ಪತ್ತೆ ಮಾಡಿದ್ದು, ಚೆನ್ನೈ ಮೂಲದ ವೈದ್ಯರ ತಂಡದ ಅಧ್ಯಯನದಂತೆ ಚೇತರಿಸಿಕೊಂಡ ರೋಗಿಗಳಿಗೆ ದೀರ್ಘಕಾಲ ಆಯಾಸದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅಮೆರಿಕದ ಮಯೋ ಕ್ಲಿನಿಕ್ನ ಲಸಿಕಾ ತಂಡ ಕಂಡುಕೊಂಡಂತೆ ಸೆಲ್ಯುಲಾರ್ ಹಾನಿಗೆ ಸಂಬಂಧಿಸಿದಂತೆ ಸಮಸ್ಯೆ ಉಂಟಾಗುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಸದ್ಯ ರಾಜ್ಯದ ತಜ್ಞರು ಮಾಡಲಿರುವ ಈ ಸಂಶೋಧನೆಗಳು ಚಿಕಿತ್ಸೆಯ ಪ್ರೊಟೋಕಾಲ್ಗಳು, ಕೊರೋನಾ ನಂತರದ ಆರೈಕೆ ಮೊದಲಾದ ವಿಚಾರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ತಂಡದ ತಜ್ಞರನ್ನು ಸಹ ಆದಷ್ಟು ಶೀಘ್ರದಲ್ಲೇ ಗುರುತಿಸುವುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.