ನವದೆಹಲಿ: ಈ ವರ್ಷದ ಆರಂಭದಲ್ಲಿ ನೇರ ತೆರಿಗೆ ವಲಯದಲ್ಲಿ ಕೇಂದ್ರ ಸರ್ಕಾರ ಪ್ರಾರಂಭಿಸಿದ “ವಿವಾದ್ ಸೆ ವಿಶ್ವಾಸ್” ಯೋಜನೆಯು ಸೆಪ್ಟೆಂಬರ್ 8 ರವರೆಗೆ 9,538 ಕೋಟಿ ರೂಪಾಯಿ ಆದಾಯ ಬರುವಂತೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ರಾಜ್ಯಸಭೆಯಲ್ಲಿ ಈ ಬೆಳವಣಿಗೆಯ ಮಾಹಿತಿಯನ್ನು ಹಂಚಿಕೊಂಡ ಕೇಂದ್ರ ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು, ಈ ಯೋಜನೆಯಡಿ ಈವರೆಗೆ 35,074 ಡಿಕ್ಲರೇಶನ್ಗಳನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ನೇರ ತೆರಿಗೆಯಲ್ಲಿನ ವಿವಾದಗಳನ್ನು ಪರಿಹರಿಸುವ ನಿಟ್ಟಿನಲ್ಲಿನ ಈ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪರಿಚಯಿಸಿದ್ದು, ಇದು ತೆರಿಗೆದಾರರಿಗೆ ಬಾಕಿ ಇರುವ ತೆರಿಗೆಯನ್ನು ಪಾವತಿಸಲು ಅನುವು ಮಾಡಿಕೊಡುತ್ತದೆ ಮತ್ತು ಬಡ್ಡಿ ಹಾಗೂ ದಂಡದಿಂದ ಅವರಿಗೆ ಮನ್ನಾ ಪಡೆಯಲು ಅವಕಾಶವನ್ನು ಒದಗಿಸುತ್ತದೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ನ ಭಾಗವಾಗಿ ಈ ಯೋಜನೆಯನ್ನು ಘೋಷಿಸಲಾಯಿತು.
ಈ ಯೋಜನೆಯನ್ನು ಮಾರ್ಚ್ ತಿಂಗಳಲ್ಲಿ ಸಂಸತ್ತು ಅಂಗೀಕರಿಸಿತ್ತು ಮತ್ತು ಇದು ಡಿಸೆಂಬರ್ 31, 2020 ರವರೆಗೆ ಮಾನ್ಯವಾಗಿರಲಿದೆ.
ಈ ಯೋಜನೆಯಡಿ ಒಟ್ಟು 9.32 ಲಕ್ಷ ಕೋಟಿ ರೂಪಾಯಿಗಳನ್ನು ಒಳಗೊಂಡ 4.83 ಲಕ್ಷ ನೇರ ತೆರಿಗೆ ವಿವಾದ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ ಎಂಬುದು ಗಮನಾರ್ಹ. ಈ ಮೊತ್ತವು 2018-19ನೇ ಹಣಕಾಸು ವರ್ಷದಲ್ಲಿ ಸರ್ಕಾರದ ಸಂಪೂರ್ಣ ನೇರ ತೆರಿಗೆ ಸಂಗ್ರಹದ ಶೇಕಡಾ 82 ಕ್ಕೆ ಸಮನಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.