ನವದೆಹಲಿ: ವಿದೇಶಗಳಿಂದ ಸೇವಾ ಸಂಸ್ಥೆಗಳು ದೇಣಿಗೆ ಪಡೆಯಲು ಆಧಾರ್ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸುವ ‘ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆ, 2010 ತಿದ್ದುಪಡಿಗೆ’ ಸೋಮವಾರ ಲೋಕಸಭೆ ಅನುಮೋದನೆ ನೀಡಿದೆ. ಇದನ್ನು ಕೇಂದ್ರ ಸಚಿವ ಅಮಿತ್ ಶಾ ಮಂಡನೆ ಮಾಡಿದರು.
ಈ ಎಫ್ಸಿಆರ್ಎ ತಿದ್ದುಪಡಿಯಡಿ, ಎನ್ಜಿಒಗಳು ತಮ್ಮ ಆಡಳಿತಾತ್ಮಕ ವೆಚ್ಚಗಳನ್ನು ಸಂಬಳವನ್ನು ಪಾವತಿಸಲು ಶೇ 20 ಕ್ಕಿಂತ ಹೆಚ್ಚು ವಿದೇಶಿ ಕೊಡುಗೆಗಳನ್ನು ಬಳಸುವಂತಿಲ್ಲ. ಇದು ಯಾವುದೇ ಸಾರ್ವಜನಿಕ ಸೇವೆಯಲ್ಲಿ ಇರುವವರು ಯಾವುದೇ ವಿದೇಶಿ ಹಣವನ್ನು ಪಡೆಯದಂತೆ ತಡೆಯುತ್ತದೆ. ಐಪಿಸಿಯ ಸೆಕ್ಷನ್ 21 ರ ಪ್ರಕಾರ ಸಾರ್ವಜನಿಕ ಸೇವಕರ ವ್ಯಾಖ್ಯಾನವನ್ನು ರೂಪಿಸಲಾಗುತ್ತದೆ.
ಪ್ರತಿ ವರ್ಷ ಎನ್ಜಿಓಗಳಿಗೆ ಹರಿದು ಬರುವ ಸಾವಿರಾರು ಕೋಟಿ ರೂಪಾಯಿ ವಿದೇಶಿ ದೇಣಿಯ ಬಳಕೆಯು ಪಾರದರ್ಶಕವಾಗಿರಲು ಹಾಗೂ ಲೆಕ್ಕಾಚಾರ ಹೊಂದಿರಲು ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಗೆ (ಎಫ್ಸಿಆರ್ಎ) ತರಲಾಗಿರುವ ತಿದ್ದುಪಡಿ ಸಹಕಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ಹೇಳಿತ್ತು.
ಎಫ್ಸಿಆರ್ಎ ತಿದ್ದುಪಡಿಗೆ ಮೇಲ್ಮನೆಯಿಂದ ಅನುಮೋದನೆ ಪಡೆದು ಅದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಂಕಿತ ದೊರೆತರೆ, ಸಾರ್ವಜನಿಕ ಸೇವೆಯಲ್ಲಿರುವವರು ವಿದೇಶಿ ದೇಣಿಗೆ ಪಡೆಯುವುದಕ್ಕೆ ನಿರ್ಬಂಧ ಬೀಳಲಿದೆ. ಹಾಗೂ ವಿದೇಶಿ ಮೂಲಗಳಿಂದ ದೇಣಿಗೆ ಪಡೆಯಲಿರುವ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಆಧಾರ್ ಸಂಖ್ಯೆ ನೀಡುವುದು ಕಡ್ಡಾಯವಾಗಲಿದೆ.
ಕಾಯ್ದೆಗೆ ತಿದ್ದುಪಡಿಯಿಂದಾಗಿ ಸ್ವೀಕರಿಸಲಾಗುವ ವಿದೇಶಿ ದೇಣಿಗೆಯಲ್ಲಿ ಆಡಳಿತಾತ್ಮಕ ಉದ್ದೇಶಗಳಿಗೆ ಶೇ 50ರಷ್ಟು ಬದಲು ಶೇ 20ರಷ್ಟು ಮೊತ್ತವನ್ನಷ್ಟೇ ಬಳಸಲು ಅವಕಾಶವಿರುತ್ತದೆ.
ಮೇ 1, 2011ರಂದು ಕಾಯ್ದೆ ಜಾರಿಗೆ ಬಂದಿದ್ದು, ಈವರೆಗೆ ಎರಡು ಬಾರಿ ತಿದ್ದುಪಡಿಯಾಗಿದೆ. ಮೊದಲ ಬಾರಿ 2016ರಲ್ಲಿ ಹಣಕಾಸು ಕಾಯ್ದೆ 2016ರ ವಿಧಿ 236 ಹಾಗೂ ಎರಡನೇ ಬಾರಿಗೆ 2018ರಲ್ಲಿ ಸೆಕ್ಷನ್ 220ಕ್ಕೆ ತಿದ್ದುಪಡಿ ಆಗಿದೆ.
ಅಂಕಿ-ಅಂಶಗಳ ಪ್ರಕಾರ, 2016-17 ಮತ್ತು 2018-19ರ ಅವಧಿಯಲ್ಲಿ ವಿವಿಧ ನೋಂದಾಯಿತ ಸೇವಾ ಸಂಸ್ಥೆಗಳು ಒಟ್ಟು ₹58,000 ಕೋಟಿ ವಿದೇಶಿ ದೇಣಿಗೆಯನ್ನು ಸ್ವೀಕರಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.