ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಕಾರಣ ಬೇಡಿಕೆಯ ಕೊರತೆಯಿಂದಾಗಿ ಅಂತರರಾಷ್ಟ್ರೀಯ ತೈಲ ಬೆಲೆಗಳು ಏಪ್ರಿಲ್-ಮೇ ತಿಂಗಳಲ್ಲಿ ಎರಡು ದಶಕಗಳ ಕನಿಷ್ಠ ಮಟ್ಟಕ್ಕೆ ಇಳಿದವು. ಇಂತಹ ಸಂದರ್ಭದಲ್ಲಿ ಭಾರತವು ತನ್ನ ಪಾದೂರು, ವಿಶಾಖಪಟ್ಟಣಂ ಮತ್ತು ಮಂಗಳೂರಿನಲ್ಲಿನ ಮೂರು ಕಾರ್ಯತಂತ್ರದ ಭೂಗತ ಕಚ್ಚಾ ತೈಲ ಸಂಗ್ರಹಣೆಗಳನ್ನು ಭರ್ತಿ ಮಾಡುವ ಮೂಲಕ ಪರಿಸ್ಥಿತಿಯ ಲಾಭವನ್ನು ಗಳಿಸಿದೆ ಎಂದು ವರದಿಗಳು ತಿಳಿಸಿವೆ.
ಜನವರಿ 2020 ರಲ್ಲಿ, ಕಚ್ಚಾ ತೈಲದ ಪ್ರತಿ ಬ್ಯಾರೆಲ್ಗೆ ಸರಾಸರಿ ವೆಚ್ಚ 60 ಡಾಲರ್ ಆಗಿತ್ತು. ಈ ದರ ಬೇಸಿಗೆಯ ಸಂದರ್ಭದಲ್ಲಿ ಪ್ರತಿ ಬ್ಯಾರೆಲ್ಗೆ 19 ಡಾಲರ್ಗೆ ಇಳಿಯಿತು. ಈ ಹಿನ್ನೆಲೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಚ್ಚಾ ತೈಲವನ್ನು ಸಂಗ್ರಹಿಸುವಂತೆ ಸರ್ಕಾರಿ ಒಡೆತನದ ತೈಲ ಸಂಸ್ಥೆಗಳಿಗೆ ಕೇಂದ್ರ ನಿರ್ದೇಶವನ್ನು ನೀಡಿತ್ತು. ಈ ಮಹತ್ವದ ಉಪಕ್ರಮ ಆರಂಭಿಸಿದ ಭಾರತ 5,069 ಕೋಟಿ ರೂ.ಗಳನ್ನು ಉಳಿಸಿದೆ.
ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಬಗ್ಗೆ ಬೆಳಕು ಚೆಲ್ಲಿದ್ದಾರೆ. “ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಡಿಮೆ ಕಚ್ಚಾ ತೈಲ ಬೆಲೆಗಳ ಲಾಭವನ್ನು ಪಡೆದುಕೊಂಡ ಭಾರತ, 2020 ರ ಏಪ್ರಿಲ್-ಮೇ ತಿಂಗಳಲ್ಲಿ 16.71 ಮಿಲಿಯನ್ ಬ್ಯಾರೆಲ್ (ಎಂಬಿಬಿಎಲ್) ಕಚ್ಚಾ ತೈಲ ಖರೀದಿಸಿತು ಮತ್ತು ವಿಶಾಖಪಟ್ಟಣಂ, ಮಂಗಳೂರು ಮತ್ತು ಪಾದೂರುಗಳಲ್ಲಿ ರಚಿಸಲಾದ ಎಲ್ಲಾ ಮೂರು ಕಾರ್ಯತಂತ್ರದ ಪೆಟ್ರೋಲಿಯಂ ಸಂಗ್ರಹಗಳಲ್ಲಿ ಅದನ್ನು ಸಂಗ್ರಹಿಸಿಟ್ಟಿತು” ಎಂದಿದ್ದಾರೆ.
ತೈಲವನ್ನು ಇರಾಕ್, ಯುಎಇ ಮತ್ತು ಸೌದಿ ಅರೇಬಿಯಾದಿಂದ ಖರೀದಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.