ನವದೆಹಲಿ: ಠೇವಣಿದಾರರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಭಾರತೀಯ ರಿಸರ್ವ್ ಬ್ಯಾಂಕ್ನ ಮೇಲ್ವಿಚಾರಣೆ ವ್ಯಾಪ್ತಿಗೆ ಸಹಕಾರ ಬ್ಯಾಂಕ್ಗಳನ್ನೂ ತರುವ ಮಸೂದೆಗೆ ಸಂಸತ್ತು ಅನುಮತಿ ನೀಡಿದೆ.
ಈಗಾಗಲೇ ಜಾರಿಯಲ್ಲಿರುವ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2020 ಮಸೂದೆಗೆ ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕಾರ ನೀಡಲಾಯಿತು. ಈ ಸಂಬಂಧ ಸುಗ್ರೀವಾಜ್ಞೆಯನ್ನು ಜೂನ್ 26 ರಂದು ಹೊರಡಿಸಲಾಗಿದ್ದು, ಸೆ. 16 ರಂದು ಲೋಕಸಭೆಯಲ್ಲಿ ಈ ಮಸೂದೆಗೆ ಅಂಗೀಕಾರ ದೊರೆತಿತ್ತು.
ಈ ಮಸೂದೆಗೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಹಿತಿ ನೀಡಿದ್ದು, ಇದು ಸಹಕಾರ ಸಂಘಗಳ ವೃತ್ತಿಪರತೆಯನ್ನು ಬಲಪಡಿಸಲಿದೆ. ಬಂಡವಾಳ ಕ್ರೋಢೀಕರಣ, ಆಡಳಿತ ಸುವ್ಯವಸ್ಥೆ ಕಾಪಾಡಿಕೊಳ್ಳುವುದು, ಠೇವಣಿದಾರರ ಹಿತ ಕಾಪಾಡುವುದು ಮೊದಲಾದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸಹಕಾರ ಬ್ಯಾಂಕ್ಗಳನ್ನು ಆರ್.ಬಿ.ಐ. ನಿಯಂತ್ರಣಕ್ಕೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.