ಬೆಂಗಳೂರು: ಕೊರೋನಾ ಸಂಕಷ್ಟದಿಂದಾಗಿ ದೇಶದ ಎಲ್ಲಾ ಕ್ಷೇತ್ರಗಳೂ, ಮಧ್ಯಮ ವರ್ಗದವರು ಆರೋಗ್ಯ, ಆಹಾರ ಸಮಸ್ಯೆಯ ಜೊತೆಗೆ ಆರ್ಥಿಕ ಸಮಸ್ಯೆ ಅನುಭವಿಸುವಂತಾಗಿದೆ. ಕೊರೋನಾ ಲಾಕ್ಡೌನ್ನಿಂದಾಗಿ ಅತಿಥಿ ಉಪನ್ಯಾಸಕರ ಸ್ಥಿತಿಯೂ ತೀರಾ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ಬಾಕಿ ಉಳಿದಿರುವ ವೇತನ ಪಾವತಿಗೆ ಶೀಘ್ರ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 14,447 ಅತಿಥಿ ಉಪನ್ಯಾಸಕರನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಇವರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರದಲ್ಲೇ ದೊರೆಯುವಂತೆ ಮಾಡಲಾಗುವುದು ಎಂದು ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಕೊರೋನಾ ಸಂಕಷ್ಟದಿಂದಾಗಿ ಕಳೆದ ಮಾರ್ಚ್ನಿಂದ ತೊಡಗಿದಂತೆ ಕಾಲೇಜುಗಳು ಮುಚ್ಚಿವೆ. ಮಾರ್ಚ್ವರೆಗೆ ಎಲ್ಲಾ ಅತಿಥಿ ಉಪನ್ಯಾಸಕರ ವೇತನವನ್ನು ಪಾವತಿ ಮಾಡಲಾಗಿದೆ. ಇದೀಗ ಎಪ್ರಿಲ್ ತಿಂಗಳಿನಿಂದ ಆಗಸ್ಟ್ ವರೆಗಿನ ಬಾಕಿ ವೇತನವನ್ನು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ಆ ಮೂಲಕ ಬಡ ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.