ತಿರುಪತಿ: ಕೊರೋನಾ ಸಂಕಷ್ಟದ ನಡುವೆಯೂ ನೆರೆಯ ರಾಜ್ಯ ಆಂಧ್ರಪ್ರದೇಶದ ತಿರುಮಲದಲ್ಲಿ ಸಂಭ್ರಮದ ಸಾಲಕೊಟ್ಲ ಬ್ರಹ್ಮೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರೂ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ವೆಂಕಟೇಶ್ವರ ದೇಗುಲದಲ್ಲಿ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಇಂದು ಸಂಜೆ ರಾಜ್ಯದ ಪರವಾಗಿ ಯಡಿಯೂರಪ್ಪ ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರೊಂದಿಗೆ ಪಟ್ಟೆವಸ್ತ್ರಗಳನ್ನೂ ಸಮರ್ಪಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಐದು ದಿನಗಳ ಸಂಭ್ರಮದಲ್ಲಿ ಇಂದು ಸಂಜೆ ವೆಂಕಟೇಶ್ವರ ಮೋಹಿನಿ ಅವತಾರದಲ್ಲಿ ಭಕ್ತರನ್ನು ಹರಸಲಿದ್ದಾನೆ. ಇಂದು ರಾತ್ರಿ ಎಂಟು ಗಂಟೆಯಿಂದ ಗರುಡ ವಾಹನ ಮಲೆಯಪ್ಪ ಸ್ವಾಮಿಯ ಮೆರವಣಿಗೆ ನಡೆಯಲಿದೆ. ಕೊರೋನಾ ಕಾರಣದಿಂದ ಸರಳ ಸಮಾರಂಭ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.