ನವದೆಹಲಿ: ಮಹಾಮಾರಿ ಕೊರೋನಾದಿಂದ ಬಿಜೆಪಿ ನಾಯಕ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಕೊನೆಯುಸಿರೆಳೆದಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಬೆಳಗಾವಿ ಮೂಲದವರಾದ ಇವರಿಗೆ 65 ವರ್ಷ ವಯಸ್ಸಾಗಿತ್ತು. 15 ದಿನಗಳ ಹಿಂದೆ ದೇಹಾರೋಗ್ಯ ವೈಪರೀತ್ಯವಾದ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004, 2009, 2014 ಮತ್ತು 2019 ರಲ್ಲಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಇವರು ಕೇಂದ್ರ ಸಚಿವರಾದ ಬಳಿಕ ಕರ್ನಾಟಕ ರಾಜ್ಯಕ್ಕೂ ಹಲವಾರು ಕೊಡುಗೆಗಳನ್ನು ನೀಡಿದ್ದರು.
ಇವರ ಅಗಲಿಕೆಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.