ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಕಾಂಗ್ರೆಸ್ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಅವರ ಹೆಸರು ಇದೆ. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ಅವರ ಹೆಸರನ್ನು ಹಾಕಲಾಗಿದೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ 17ರಂದು ಸಲ್ಲಿಸಲಾದ 17000 ಆರೋಪಪಟ್ಟಿಯಲ್ಲಿ ಸಲ್ಮಾನ್ ಖುರ್ಷಿದ್, ಉಮರ್ ಖಲಿದ್, ನದೀಂ ಖಾನ್ ಸೇರಿದಂತೆ ಹಲವರ ಹೆಸರಿದೆ. ಇವರೆಲ್ಲರೂ ದೆಹಲಿ ಗಲಭೆಗೆ ಕುಮ್ಮಕ್ಕು ನೀಡುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಮತ್ತು ಜನರು ಗುಂಪು ಸೇರುವಂತೆ ಮಾಡಿದ್ದರು ಎಂಬ ಆರೋಪವಿದೆ.
ಸಿಎಎ ವಿರುದ್ಧ ನಡೆದ ಪ್ರತಿಭಟನೆಯು ನಂತರ ದೊಡ್ಡ ಮಟ್ಟದಲ್ಲಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಗಲಭೆ ದೊಂಬಿಗಳು ಭುಗಿಲೆದ್ದಿದ್ದವು. ಹಲವು ಆಸ್ತಿಪಾಸ್ತಿ ನಷ್ಟವಾಗಿವೆ ಮತ್ತು ಅನೇಕ ಮಂದಿ ಜೀವವನ್ನು ಕಳೆದುಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಘಟಕ ತನಿಖೆಯನ್ನು ನಡೆಸುತ್ತಿದ್ದು, ಗಲಭೆಗೆ ಪಿತೂರಿ ನಡೆಸಿದವರ ಹೆಡೆಮುರಿ ಕಟ್ಟುವ ಕಾರ್ಯವನ್ನು ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.