ಬೆಂಗಳೂರು: ವಕ್ಫ್ ಮಂಡಳಿ ಆಸ್ತಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಚಿಸಲಾಗಿದ್ದ ಅನ್ವರ್ ಮಾಣಿಪ್ಪಾಡಿ ಸಮಿತಿ ಸುದೀರ್ಘ 8 ವರ್ಷಗಳ ತನಿಖೆಯ ನಂತರ ವಿಧಾನಸಭೆಗೆ ತನ್ನ ವರದಿಯನ್ನು ಸಲ್ಲಿಕೆ ಮಾಡಿದೆ.
ಇದರಲ್ಲಿ ಕಾಂಗ್ರೆಸ್ ಪಕ್ವದ ಹಿರಿಯ ನೇತಾರರನ್ನೊಳಗೊಂಡಂತೆ ಅನೇಕ ಕಾಂಗ್ರೆಸ್ ನಾಯಕರ ಹೆಸರನ್ನು ಈ ಅವ್ಯವಹಾರ ತನಿಖಾ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಶಾಸಕ ಹ್ಯಾರಿಸ್, ರಾಜ್ಯಸಭಾ ಸದಸ್ಯ ರೆಹಮಾನ್ ಖಾನ್, ತನ್ವೀರ್ ಸೇಠ್, ದಿ. ಜಾಫರ್ ಶರೀಫ್, ಸಿ.ಎಂ. ಇಬ್ರಾಹಿಂ, ರೋಷನ್ ಬೇಗ್, ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಖಮರುಲ್ಲಾ ಇಸ್ಲಾಂ ಮೊದಲಾದವರ ಹೆಸರನ್ನು ಈ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಈ ಹಗರಣ ಈ ಹಿಂದೆ ದೇಶದಲ್ಲಿ ದೊಡ್ಡ ಸದ್ದು ಮಾಡಿದ್ದ 2 ಜಿ ಹಗರಣಕ್ಕಿಂತಲೂ ದೊಡ್ಡ ಮಟ್ಟದ್ದಾಗಿದ್ದು, ಸುಮಾರು 2 ಲಕ್ಷ ಕೋಟಿ ರೂ. ಆಸ್ತಿ ದುರುಪಯೋಗಕ್ಕೆ ಸಂಬಂಧಿಸಿದ್ದಾಗಿದೆ. ಈ ಪ್ರಕರಣ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕಲ್ಬುರ್ಗಿ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಸಂಬಂಧಿಸಿದಂತಿದೆ. ಸುಮಾರು 2,700 ಎಕರೆಗಳಷ್ಟು ಭೂಮಿಯ ಒತ್ತುವರಿ ಅಥವಾ ಮಾರಾಟಕ್ಕೆ ಸಂಬಂಧಿಸಿದೆ ಎನ್ನಲಾಗಿದೆ.
ಈ ವರದಿಯು ರಾಜ್ಯದ ಬೋರ್ಡ್ ಆಫ್ ವಕ್ಫ್ ಅನ್ನು ಒಂದು ವರ್ಷದ ಮಟ್ಟಿಗೆ ಅಮಾನತು ಮಾಡುವುದು ಅಥವಾ ಲೋಕಾಯುಕ್ತ ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಶಿಫಾರಸ್ಸು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.