ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಪ್ಯಾಕೇಜ್ ಅಡಿಯಲ್ಲಿ, ಕೇಂದ್ರಾಡಳಿತ ಪ್ರದೇಶದ ಆಡಳಿತ ಮಂಡಳಿಯು ಕಾಶ್ಮೀರಿ ಪಂಡಿತರಿಗೆ ಸುಮಾರು ಎರಡು ಸಾವಿರ ಸರ್ಕಾರಿ ಹುದ್ದೆಗಳನ್ನು ಮರು ಹಂಚಿಕೆ ಮಾಡಲು ಅನುಮೋದನೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರ ಸೇವಾ ಆಯ್ಕೆ ಮಂಡಳಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ವಿಪತ್ತು ನಿರ್ವಹಣಾ, ಪರಿಹಾರ ಮತ್ತು ಪುನರ್ವಸತಿ ಮತ್ತು ಮರುನಿರ್ಮಾಣ ಇಲಾಖೆಯು ಹುದ್ದೆಗಳಿಗಾಗಿ ಪ್ರಸ್ತಾವನೆ ಸಲ್ಲಿಸಿದ ಆರು ತಿಂಗಳ ಒಳಗೆ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಆಯ್ಕೆ ಪ್ರಕ್ರಿಯೆಯು ಲಿಖಿತ ಅಥವಾ ಮೌಖಿಕ ಪರೀಕ್ಷೆಯ ಮೂಲಕ ನಡೆಯಲಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಉದ್ಯಮ ಮತ್ತು ವಿವಿಧ ವಲಯಗಳ ಪುನಶ್ಚೇತನಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು 1350 ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
2015ರಲ್ಲಿ 3000 ಹುದ್ದೆಗಳ ಮರು ಹಂಚಿಕೆಯನ್ನು ಕಾಶ್ಮೀರಿ ಪಂಡಿತರಿಗಾಗಿ ಘೋಷಣೆ ಮಾಡಲಾಗಿತ್ತು. ಇದರಲ್ಲಿ 816 ನೇಮಕಾತಿಗಳನ್ನು ಮಾಡಲಾಗಿತ್ತು. ಉಳಿದ 1997 ಹುದ್ದೆಗಳು ಖಾಲಿ ಇವೆ.
ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿಯಾದ ಬಳಿಕ ಆಡಳಿತ ಮಂಡಳಿಯು ಹುದ್ದೆಗಳ ಮರು ಹಂಚಿಕೆಗೆ ಅನುಮೋದನೆಯನ್ನು ನೀಡಿದೆ. ನೋಂದಾಯಿತ ವಲಸಿಗ ಕಾಶ್ಮೀರಿ ಪಂಡಿತರಿಗೆ , ವಲಸಿಗರಲ್ಲದ ಕಾಶ್ಮೀರಿ ಪಂಡಿತರಿಗೆ ಹುದ್ದೆಗಳು ಸಿಗಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.