ನವದೆಹಲಿ: ಪ್ರಧಾನ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ – “ಸೌಭಾಗ್ಯ” ಯೋಜನೆ ಪ್ರಾರಂಭವಾಗಿ ಮೂರು ವರ್ಷಗಳನ್ನು ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಮತ್ತು ನಗರ ಪ್ರದೇಶ ಸೇರಿದಂತೆ ದೇಶದ ಎಲ್ಲಾ ಕುಟುಂಬಗಳ ವಿದ್ಯುದ್ದೀಕರಣವನ್ನು ಖಚಿತಪಡಿಸಿಕೊಳ್ಳಲು 2017ರ ಸೆಪ್ಟೆಂಬರ್ 25 ರಂದು ಈ ಯೋಜನೆಯನ್ನು ಪ್ರಾರಂಭಿಸಿದ್ದರು.
ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ಮತ್ತು ದೇಶದಾದ್ಯಂತ ನಗರ ಪ್ರದೇಶಗಳಲ್ಲಿನ ಎಲ್ಲಾ ಬಡ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸುವ ಮೂಲಕ ಸಾರ್ವತ್ರಿಕ ಗೃಹಬಳಕೆಯ ವಿದ್ಯುದ್ದೀಕರಣವನ್ನು ಸಾಧಿಸುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಯಿತು.
16,320 ಕೋಟಿ ರೂಪಾಯಿಗಳ ವಿನಿಯೋಗದೊಂದಿಗೆ ಈ ಯೋಜನೆಯನ್ನು ಪ್ರಾರಂಭಿಸಲಾಯಿತು. ಒಟ್ಟು ಮೊತ್ತದಲ್ಲಿ, ಗ್ರಾಮೀಣ ಕುಟುಂಬಗಳಿಗೆ 14 ಸಾವಿರ ಕೋಟಿ ರೂಪಾಯಿಗಳಷ್ಟು ಹಣ ವಿನಿಯೋಗವಾಗಿದ್ದರೆ, ನಗರ ಕುಟುಂಬಗಳಿಗೆ 2,295 ಕೋಟಿ ರೂಪಾಯಿಗಳ ವಿನಿಯೋಗವಾಗಿದೆ. ಸೌಭಾಗ್ಯ ಯೋಜನೆಯಡಿ ಈವರೆಗೆ 2 ಕೋಟಿ 62 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.