ಬೆಂಗಳೂರು: ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ 2020 ಅನ್ನು ಸಚಿವ ಆರ್. ಅಶೋಕ್ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಬಗರ್ ಹುಕುಂನ ಕಾಲಮಿತಿಯನ್ನು 2 ವರ್ಷಗಳ ಅವಧಿಗೆ ವಿಸ್ತರಣೆ ಮಾಡಲು ಈ ಮಸೂದೆಯಲ್ಲಿ ಅನುವು ಮಾಡಿಕೊಡಲಾಗಿದೆ.
ಅನಧಿಕೃತ ಕೃಷಿ ಭೂಮಿಗಳ ಸಕ್ರಮಕ್ಕೆ ಸಂಬಂಧಪಟ್ಟಂತೆ ಹಲವಾರು ಅರ್ಜಿಗಳ ವಿಲೇವಾರಿ ಬಾಕಿ ಇದೆ. ನಮೂನೆ 50 ರಲ್ಲಿ 10572, ನಮೂನೆ 53 ರಲ್ಲಿ 1,40,781 ಅರ್ಜಿಗಳ ವಿಲೇವಾರಿ ನಡೆಯಬೇಕಿದೆ. ಆದ್ದರಿಂದ ಈ ಕಾಲಮಿತಿಯನ್ನು ವಿಸ್ತರಣೆ ಮಾಡುವುದು ತೀರಾ ಅಗತ್ಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಮಸೂದೆಯಲ್ಲಿ ಸಾರ್ವಜನಿಕ ಆಕ್ಷೇಪಣಾ ಅವಧಿಯನ್ನು 30 ದಿನಗಳಿಗೆ ಕಡಿಮೆ ಮಾಡುವುದಕ್ಕೆ ಸಂಬಂಧಿಸಿದಂತೆಯೂ ಪ್ರಸ್ತಾಪ ಮಾಡಲಾಗಿದೆ.
ಇದರ ಜೊತೆಗೆ ಸಾಂಕ್ರಾಮಿಕ ರೋಗಗಳು, ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಸಂತ್ರಸ್ಥರಿಗೆ ಬಿಡುಗಡೆ ಮಾಡುವ ಸಾಧಿಲ್ವಾರು ನಿಧಿಯನ್ನು 500 ಕೋಟಿ ರೂ. ಗಳಿಗೆ ಏರಿಕೆ ಮಾಡುವ ಸಲುವಾಗಿ ಕರ್ನಾಟಕ ಸಾಧಿಲ್ವಾರು ನಿಧಿ (ತಿದ್ದುಪಡಿ) ಮಸೂದೆಗೂ ಈ ವೇಳೆ ಅನುಮತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.