ಚೆನ್ನೈ: ತನ್ನ ಕಂಠಿಸಿರಿಯ ಮೂಲಕವೇ ಭಾರತೀಯರ ಮನ ಗೆದಿದ್ದ ಖ್ಯಾತ ಗಾಯಕ ಎಸ್.ಪಿ ಬಾಲ ಸುಬ್ರಹ್ಮಣ್ಯಂ ಅವರು ಇಹಲೋಕವನ್ನು ತ್ಯಜಿಸಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆ ಫಲ ನೀಡದೆ ಬಾರದೂರಿಗೆ ಪಯಣಿಸಿದ್ದಾರೆ.
ವಿವಿಧ ಭಾಷೆಗಳ ಅನೇಕ ಚಲನಚಿತ್ರಗಳ ಗೀತೆಗಳೂ ಸೇರಿದಂತೆ ಹಲವಾರು ಭಾವಗಳಿಗೆ, ಗೀತೆಗಳಿಗೆ ತಮ್ಮ ಧ್ವನಿಯ ಮೂಲಕ ಜೀವ ತುಂಬಿದ್ದ ಗಾನ ಗಂಧರ್ವ ಬಾಲಸುಬ್ರಹ್ಮಣ್ಯಂ ಅವರಿಗೆ ಕೆಲವು ಸಮಯದ ಹಿಂದಷ್ಟೇ ಕೊರೋನಾ ಸೋಂಕು ತಗುಲಿ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರು ಚೇತರಿಸಿಕೊಳ್ಳುತ್ತಿರುವ ಬಗ್ಗೆ ಸುದ್ದಿಗಳು ಹರಿದಾಡುತ್ತಿತ್ತು. ಆದರೆ ನಿನ್ನೆಯಿಂದ ಮತ್ತೆ ಅವರ ಆರೋಗ್ಯಸ್ಥಿತಿ ಗಂಭೀರಗೊಂಡ ಬಗ್ಗೆ ಮಾಹಿತಿ ಇತ್ತು, ಆದರೆ ಇಂದು ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇವರು ಆಗಸ್ಟ್ ಮೊದಲ ವಾರದಲ್ಲಿ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ದೇಶ ವಿದೇಶಗಳಲ್ಲಿ ಹಬ್ಬಿರುವ ಇವರ ಅಭಿಮಾನಿಗಳು ಇವರ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದರು. ಕೆಲವು ದಿನಗಳ ಹಿಂದಷ್ಟೇ ಅವರ ಪುತ್ರನೂ ಎಸ್.ಪಿ.ಬಿ. ಚೇತರಿಸಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಜೊತೆಗೆ ಕೆಲ ದಿನಗಳ ಹಿಂದೆ ಸ್ವತಃ ಎಸ್ಪಿಬಿ ಅವರೇ ತಾವು ಗುಣಮುಖರಾಗುತ್ತಿದ್ದು, ಶೀಘ್ರ ಮನೆಗೆ ತೆರಳುವುದಾಗಿಯೂ ತಿಳಿಸಿದ್ದರು. ಆದರೆ ಇದೀಗ ಕಾಲನ ಕರೆಗೆ ಓ ಗೊಟ್ಟು ಗಾನ ಲೋಕದ ಗಾರುಡಿಗ, ಮೇರು ಪ್ರತಿಭೆ ಇಹಲೋಕ ತ್ಯಜಿಸಿದ್ದು, ಅವರ ಕುಟುಂಬ ವರ್ಗ, ಕೋಟ್ಯಂತರ ಅಭಿಮಾನಿಗಳಿಗೆ ನೋವನ್ನುಂಟು ಮಾಡಿದ್ದಾರೆ.
ಅವರ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.