ಬೆಂಗಳೂರು: ಬೆಚ್ಚಿ ಬೀಳಿಸಿದ್ದ ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎನ್ಐಎ, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮುಖ್ಯ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
ಬಂಧಿತ ಆರೋಪಿಯನ್ನು ಕೆಜಿ ಹಳ್ಳಿಯ ಸೈಯದ್ ಸಾಧಿಕ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಗುರುವಾರ ಎಸ್ಡಿಪಿಐ ಕಛೇರಿಯನ್ನು ಒಳಗೊಂಡಂತೆ ಸುಮಾರು 30 ಕ್ಕೂ ಹೆಚ್ಚಿನ ಪ್ರದೇಶಗಳಲ್ಲಿ ಎನ್ಐಎ ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದೆ. ಈ ಸಂದರ್ಭದಲ್ಲಿ ಬಂಧನಕ್ಕೆ ಒಳಪಡಿಸಿರುವ ಸೈಯದ್ ಸಾದಿಕ್ ಬಗೆಗೂ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದು ಕೆಜಿ ಹಳ್ಳಿಯ ಪೊಲೀಸ್ ಠಾಣೆಯ ಮೇಲಿನ ದಾಳಿಯ ಪ್ರಮುಖ ಪಾತ್ರಧಾರಿ ಆತ ಎಂದು ತಿಳಿದು ಬಂದಿದೆ. ಈತ ಖಾಸಗಿ ಬ್ಯಾಂಕ್ಗಳ ಸಾಲ ವಸೂಲಾತಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಸ್ಥಳೀಯ ಎಸ್ಡಿಪಿಐ ಜೊತೆಗೂ ನಿಖಟ ಸಂಪರ್ಕ ಇರಿಸಿಕೊಂಡಿದ್ದ. ಈ ಗಲಭೆಯ ಮುಖ್ಯ ಸಂಚುಕೋರನಾಗಿದ್ದ. ದಾಳಿಯ ಬಳಿಕ ನಾಪತ್ತೆಯಾಗಿದ್ದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಎನ್ಐಎ ಅಧಿಕಾರಿಗಳು ಏರ್ಗನ್, ಪೆಲ್ಲೆಟ್ಗಳು, ಕಬ್ಬಿಣದ ಆಯುಧಗಳು, ಮಾರಕಾಸ್ತ್ರಗಳು, ಡಿಜಿಟಲ್ ಡಿವೈಸ್ಗಳು ಸೇರಿದಂತೆ ಇನ್ನಿತರ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ. ಮಾತ್ರವಲ್ಲದೆ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
ಇನ್ನು ಈ ಗಲಭೆಗೆ ಸಂಬಂಧಿಸಿದಂತೆ ಈ ವರೆಗೆ ಎಸ್ಡಿಪಿಐ ಸಂಘಟನೆಯ ನಾಯಕ ಮುಜಾಮಿಲ್ ಪಾಷ ಸೇರಿದಂತೆ ಸುಮಾರು 300 ಆರೋಪಿಗಳನ್ನು ಈಗಾಗಲೇ ಬಂಧನಕ್ಕೆ ಒಳಪಡಿಸಲಾಗಿದೆ. ಇವರಲ್ಲಿ ಹಲವರಿಗೆ ಭಯೋತ್ಪಾದಕ ಸಂಘಟನೆಗಳ ನಂಟಿರುವುದಾಗಿಯೂ ಹೇಳಲಾಗುತ್ತಿದೆ.
ಈ ಗಲಭೆಯ ಹಿಂದಿನ ಗಂಭೀರತೆಯನ್ನು ಅರಿತ ರಾಜ್ಯ ಸರ್ಕಾರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಎನ್ಐಎಗೆ ವರ್ಗಾಯಿಸಿತ್ತು. ಎನ್ಐಎ ನಿನ್ನೆ ಬಂಧಿತ ಆರೋಪಿಗಳಿಗೆ ಸಂಬಂಧಿಸಿದ ಕಛೇರಿ, ಮನೆಗಳ ಮೇಲೆ ದಾಳಿ ನಡೆಸಿ ವರದಿ ಕಲೆ ಹಾಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.