ನವದೆಹಲಿ: ರಾಷ್ಟ್ರದ ಹಿತಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಬಿಜೆಪಿ ಕಾರ್ಯಕರ್ತರ ಜವಾಬ್ದಾರಿಯಾಗಿದೆ. ಸಮಾಜಸೇವೆಯ ಜೊತೆಜೊತೆಗೆ ನಮ್ಮ ಆಚಾರ ಮತ್ತು ವಿಚಾರಗಳು ಕೂಡ 21ನೇ ಶತಮಾನದ ಭಾರತದ ಆಕಾಂಕ್ಷೆ ಮತ್ತು ಅಪೇಕ್ಷೆಗಳನ್ನು ಪ್ರತಿಫಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನದ ನಿಮಿತ್ತ ಏರ್ಪಡಿಸಲಾಗಿದ್ದ ‘ಕಾರ್ಯಕರ್ತರೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂವಾದʼವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಇರಬಹುದು, ಆದರೆ ನಾವು ಸಣ್ಣ ಸಣ್ಣ ಗ್ರಾಮ ಮತ್ತು ಬೀದಿಗಳ ಸಂಪರ್ಕದಲ್ಲೂ ಇರಬೇಕು. ಬಡವರು ಮತ್ತು ರೈತರು, ಕಾರ್ಮಿಕರು ಮತ್ತು ಮಹಿಳೆಯರು ಆತ್ಮ ನಿರ್ಭರ ಭಾರತದ ಪ್ರೇರಣ ಶಕ್ತಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಜನಸಾಮಾನ್ಯನಿಗೆ ಅಗತ್ಯವಿದ್ದಾಗ ಬಿಜೆಪಿ ಪಕ್ಷ ಮತ್ತು ಅದರ ಕಾರ್ಯಕರ್ತರು ಜನರ ಸೇವೆ ಮಾಡಿದ್ದಾರೆ ಮತ್ತು ಮುಂದೆಯೂ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರ ಮೊದಲು ಎಂಬುದು ಬಿಜೆಪಿ ಧ್ಯೇಯವಾಗಿದೆ. ನಮ್ಮ ಸರ್ಕಾರ ಜಾರಿಗೆ ತಂದಿರುವ ಹೊಸ ಕಾರ್ಮಿಕ ಸುಧಾರಣೆಗಳು ನಮ್ಮ ಕಾರ್ಮಿಕ ಪಡೆಯ ಬದುಕನ್ನು ಪರಿವರ್ತನೆಗೊಳಿಸಲಿದೆ. ಇದುವರೆಗೆ ಕೇವಲ 30 ಶೇಕಡ ಕಾರ್ಮಿಕರು ಕನಿಷ್ಠ ವೇತನ ಖಾತ್ರಿ ವ್ಯಾಪ್ತಿಗೆ ಬರುತ್ತಿದ್ದರು. ಈಗ ಇದನ್ನು ಅಸಂಘಟಿತ ವಲಯದ ಕಾರ್ಮಿಕರಿಗೂ ವಿಸ್ತರಿಸಲಾಗಿದೆ ಎಂದರು.
ಪಂಡಿತ್ ದೀನ್ ದಯಾಳ್ ಅವರು ತೋರಿಸಿದ ಹಾದಿಯಲ್ಲಿ ಸಂಪೂರ್ಣ ಸಮರ್ಪಣಾ ಭಾವದೊಂದಿಗೆ ನಾವು ಮುನ್ನಡೆಯೋಣ ಎಂದು ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.