ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಶನಿವಾರ ಪಕ್ಷದ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ. ತೇಜಸ್ವಿ ಸೂರ್ಯ ಅವರು ಚತುರ ವಾಕ್ಪಟುವಾಗಿದ್ದು, ಬಿಜೆಪಿ ಪಕ್ಷ ಇದೀಗ ಅವರನ್ನು ರಾಷ್ಟ್ರ ರಾಜಕಾರಣದಲ್ಲಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದು, ಆ ಕಾರಣದಿಂದಲೇ ಅವರಿಗೆ ಮಹತ್ವದ ಸ್ಥಾನ ನೀಡಿದೆ ಎಂದು ಹೇಳಲಾಗುತ್ತಿದೆ.
ಸಿ.ಟಿ.ರವಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ರಾಜೀವ್ ಚಂದ್ರಶೇಖರ್ ಅವರನ್ನು ಕೂಡ ರಾಷ್ಟ್ರೀಯ ಪದಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿಗಳಾದ ರಮನ್ ಸಿಂಗ್, ವಸುಂದರ ರಾಜೆ, ರಘುಬರ್ ದಾಸ್ ಅವರನ್ನು ಪಕ್ಷದ ಉಪಾಧ್ಯಕ್ಷರಾಗಿ ಮುಂದುವರೆಸಲಾಗಿದೆ.
ರಾಷ್ಟ್ರೀಯ ವಕ್ತಾರರ ಹುದ್ದೆಯನ್ನು ಕೂಡ ಬಿಜೆಪಿ ಪರಿಷ್ಕರಣೆ ಮಾಡಿದೆ. ಪೂನಂ ಮಹಜನ್, ಮೀನಾಕ್ಷಿ ಲೇಖಿ ಅವರನ್ನು ಕೈಬಿಟ್ಟಿದೆ.
ನಡ್ಡಾ ಅವರು ಇದೇ ಮೊದಲ ಬಾರಿಗೆ ಅಧ್ಯಕ್ಷರಾದ ಬಳಿಕ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದಾರೆ.
ಭೂಪೆಂದರ್ ಯಾದವ್, ಅರುಣ್ ಸಿಂಗ್ ಅವರಂತಹ ಹಿರಿಯರನ್ನು ನಡ್ಡಾ ಪಟ್ಟಿಯಲ್ಲಿ ಉಳಿಸಿಕೊಂಡಿದ್ದಾರೆ. ರಾಮ್ ಮಾಧವ್, ಮುರಳೀಧರ್ ರಾವ್, ಅನಿಲ್ ಜೈನ್ ಅವರನ್ನು ಕೈಬಿಟ್ಟಿದ್ದಾರೆ. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರನ ಸ್ಥಾನದಿಂದ ಕೈಬಿಡಲಾಗಿದ್ದು, ಧರ್ಮೇಂದ್ರ ಪ್ರಧಾನ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈಬಿಡಲಾಗಿದೆ.
भाजपा राष्ट्रीय अध्यक्ष श्री @JPNadda ने भाजपा केंद्रीय पदाधिकारियों के नामों की घोषणा की। pic.twitter.com/oLGRoSmbPa
— BJP (@BJP4India) September 26, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.