ಶ್ರೀನಗರ: ರೋಗವನ್ನು ತಡೆಗಟ್ಟಲು ಮತ್ತು ಜನರ ಆರೋಗ್ಯ ರಕ್ಷಣೆಯ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದೊಂದಿಗೆ ಸಮಗ್ರ ಸ್ವಾಸ್ಥ್ಯ ಮಾದರಿಯನ್ನು ರಚಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ 21 ಹೊಸ ಆಯುಷ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಒದಗಿಸಲಾಗಿದೆ.
ಆರೋಗ್ಯಕರ ಜೀವನಶೈಲಿ, ಆಹಾರ, ಯೋಗ ಮತ್ತು ಔಷಧೀಯ ಸಸ್ಯಗಳ ಮೂಲಕ ರೋಗಗಳನ್ನು ತಡೆಗಟ್ಟುವಂತೆ ಜನರಲ್ಲಿ ಅರಿವನ್ನು ಮೂಡಿಸುವ ನಿಟ್ಟಿನಲ್ಲೂ ಈ ಆಯುಷ್ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.
ಆಯುಷ್ ಆರೋಗ್ಯ ಮತ್ತು ಸ್ವಾಸ್ಥ್ಯ ಕಾರ್ಯಕ್ರಮವು ಅಗತ್ಯವಿರುವವರಿಗೆ ಸೇವೆಗಳನ್ನು ಒದಗಿಸುವುದಲ್ಲದೆ, ಆಯುಷ್ ಅನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತೇಜಿಸಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸಿಂಗ್ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದರ್ವಾದಲ್ಲಿ ಔಷಧೀಯ ಸಸ್ಯಗಳ ಕೊಯ್ಲು ನಿರ್ವಹಣಾ ಕೇಂದ್ರಕ್ಕೆ ಅಡಿಪಾಯ ಹಾಕಿ, 21 ಆಯುಷ್ ಕೇಂದ್ರಗಳನ್ನು ಪ್ರಾರಂಭಿಸಿದರು.
‘ಆಯುಷ್ಮಾನ್ ಭಾರತ್’ ಉಪಕ್ರಮದ ಅಡಿಯಲ್ಲಿ ಈ 21 ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.