ಬೆಂಗಳೂರು: ರಾಜ್ಯದ ಭೂ ಕಂದಾಯ ಸುಧಾರಣಾ ಕಾಯ್ದೆಯನ್ನು ಇಂದು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಯಿತು.
ಪ್ರತಿಪಕ್ಷಗಳ ವಿರೋಧದ ನಡುವೆಯೇ ಬಿಜೆಪಿ ಸರ್ಕಾರ ಈ ವಿಧೇಯಕವನ್ನು ಅಂಗೀಕರಿಸಿದೆ. ಈ ತಿದ್ದುಪಡಿಯ ಮೂಲಕ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೃಷಿಯೇತರರೂ ಕೃಷಿ ಭೂಮಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಈ ವಿಧೇಯಕ ಕೃಷಿಯತ್ತ ಒಲವು ಹೊಂದಿರುವ ಇತರ ಜನರಿಗೂ ಅನುಕೂಲವಾಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಈ ಬಗ್ಗೆ ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್, ರಾಜ್ಯದ ಸಮಗ್ರ ಅಭಿವೃದ್ಧಿಯ ಗುರಿಯನ್ನು ಇರಿಸಿಕೊಂಡು ಈ ಕಾಯ್ದೆ ಅನುಷ್ಠಾನ ಮಾಡಲಾಗಿದೆ. ರಾಜ್ಯದಲ್ಲಿ ಪಾಳು ಬಿದ್ದಿರುವ ಕೃಷಿ ಭೂಮಿ ಉಪಯೋಗಪೂರ್ಣವಾಗುವ ನಿಟ್ಟಿನಲ್ಲಿಯೂ ಈ ಕಾಯ್ದೆ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.