ನವದೆಹಲಿ: ಒಂದನೇ ತರಗತಿಯಿಂದ ತೊಡಗಿದಂತೆ ಆರನೇ ತರಗತಿವರೆಗೂ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆಯ್ಕೆ ಮಾಡಲು ಅವಕಾಶ ನೀಡಿರುವ ಆಂಧ್ರ ಪ್ರದೇಶದ ಕ್ರಮವನ್ನು ವಿರೋಧಿಸಿರುವ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಅದರಲ್ಲಿ ಸಾಧ್ಯವಿರುವಲ್ಲೆಲ್ಲಾ ಐದನೇ ತರಗತಿಯವರೆಗಾದರೂ ಕಡ್ಡಾಯವಾಗಿ ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡಬೇಕು ಎಂದು ಹೇಳಲಾಗಿದೆ. ಸಾಂವಿಧಾನಿಕ ಅವಕಾಶ, ಜನರ ಅಪೇಕ್ಷೆ, ಪ್ರಾದೇಶಿಕತೆ ಮತ್ತು ರಾಷ್ಟ್ರೀಯ ಐಕ್ಯತೆಯನ್ನು ಗಮನದಲ್ಲಿಟ್ಟುಕೊಂಡು ತ್ರಿಭಾಷಾ ಸೂತ್ರದ ಅನುಷ್ಕಾನ ಮುಂದುವರೆಯಲಿದೆ ಎಂದೂ ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಅಫಿಡವಿಟ್ ನಲ್ಲಿ ತಿಳಿಸಿದೆ.
ಈ ತ್ರಿಭಾಷಾ ಸೂತ್ರ ಯಾವುದೇ ರಾಜ್ಯದ ಮೇಲೆಯೂ ಯಾವುದೇ ಭಾಷಾ ಹೇರಿಕೆಯಂತಹ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ನೂತನ ಶಿಕ್ಷಣ ನೀತಿ ಜಾರಿಗೆ ಕುರಿತಂತೆ ಈಗಾಗಲೇ ಎಲ್ಲಾ ರಾಜ್ಯಗಳಿಗೂ ಪತ್ರ ಬರೆಯಲಾಗಿದೆ. ಮಾತೃಭಾಷೆ ಶಿಕ್ಷಣ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿಯು ಮಹತ್ವದ ಪಾತ್ರ ವಹಿಸಲಿದೆ ಎಂದು ಕೇಂದ್ರ ತಿಳಿಸಿದೆ. ಜೊತೆಗೆ ಆಂಧ್ರಪ್ರದೇಶದ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2010 ಮಕ್ಕಳಿಗೆ ಮಾತೃಭಾಷೆಯಲ್ಲೇ ನೀಡಬೇಕೆಂದು ತಿಳಿಸಿದೆ. ಆದರೆ ಇದೀಗ ಆಂಧ್ರ ಸರ್ಕಾರ ಇದರ ವಿರುದ್ಧ ನಡೆದುಕೊಳ್ಳುತ್ತಿದೆ ಎಂದೂ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.