ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿದ ಕೃಷಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಹಲವು ಸಂಘಟನೆಗಳು ದೇಶದ ಕೆಲವು ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ನವದೆಹಲಿಯ ಇಂಡಿಯಾ ಗೇಟ್ ಬಳಿಯಲ್ಲಿ ಪಂಜಾಬ್ ಯುವ ಕಾಂಗ್ರೆಸ್ ಕಾರ್ಯಕರ್ತರು ರೈತರ ಹೆಸರಿನಲ್ಲಿ ಪ್ರತಿಭಟನೆಯನ್ನು ನಡೆಸಿ ಅನ್ನದಾತನ ಮುಖ್ಯ ಸಾಧನವಾದ ಟ್ರ್ಯಾಕ್ಟರ್ ಸುಡುವ ಮೂಲಕ ಅನಾಗರಿಕತೆಯನ್ನು ತೋರಿಸಿದ್ದಾರೆ.
ಇಂಡಿಯಾ ಗೇಟ್ ಸಮೀಪ ಸುಮಾರು 15-20 ಜನ ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪು ಇಂದು ಬೆಳಗ್ಗೆ ಟ್ರ್ಯಾಕ್ಟರ್ ಸುಟ್ಟು ತಮ್ಮ ಅಟ್ಟಹಾಸ ಮೆರೆದಿವೆ. ಆರೋಪಿಗಳ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಿರುವ ಪೊಲೀಸರು, ಟ್ರ್ಯಾಕ್ಟರ್ಗೆ ಹತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ನೂತನ ಕೃಷಿ ಮಸೂದೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿ ಮಸೂದೆಗೆ ಸಹಿ ಹಾಕಿರುವ ಬೆನ್ನಲ್ಲೇ ಹರಿಯಾಣ ಮತ್ತು ಪಂಜಾಬ್ನಲ್ಲಿಯೂ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಕರ್ನಾಟಕದಲ್ಲಿಯೂ ಇಂದು ಪ್ರತಿಭಟನೆಗೆ ಕೆಲ ಸಂಘಟನೆಗಳು ಸರ್ಕಾರ ಅನುಮತಿ ನೀಡದಿದ್ದರೂ ಕರೆ ಕೊಟ್ಟಿವೆ.
#WATCH: A tractor was set ablaze by unidentified persons near India Gate, today. DCP New Delhi says,"Around 15- 20 persons gathered here & tried to set a tractor on fire. The fire has been doused off & tractor was also removed. Those involved are being identified. Probe underway" pic.twitter.com/IKlOxq4mbj
— ANI (@ANI) September 28, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.