ಬೆಂಗಳೂರು: ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಹಾಗೆಲ್ಲಾದರೂ ಆದ ಪಕ್ಷದಲ್ಲಿ ಅಧಿಕಾರಕ್ಕೆ ಅಂಟಿಕೊಂಡು ಕೂರುವ ಜಾಯಮಾನ ನನ್ನದಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೆಲವು ಸಂಘಟನೆಗಳು ರೈತ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರವಾಗಿ ಮಾತನಾಡಿದ ಅವರು, ರೈತರು ಆತಂಕ ಪಡುವ ಅಗತ್ಯವಿಲ್ಲ. ಏಕೆಂದರೆ ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ತಮ್ಮ ಉತ್ಪಾದನೆಯನ್ನು ಎಲ್ಲಿ, ಯಾವಾಗ, ಹೇಗೆ ಬೇಕಾದರೂ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಸರ್ಕಾರ ಎಪಿಎಂಸಿ ಮುಚ್ಚುವ ಯೋಚನೆ ಮಾಡಿಲ್ಲ. ಕೃಷಿಕರು ಈ ಬಗ್ಗೆ ತಪ್ಪು ತಿಳಿದುಕೊಳ್ಳುವಂತೆ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಭೂ ಸುಧಾರಣಾ ಕಾಯ್ದೆಯ ಪ್ರಕಾರ ಪರಿಶಿಷ್ಟ ಜಾತಿ, ಪಂಗಡಗಳ ಭೂಮಿಯನ್ನು ಖರೀದಿ ಮಾಡಲು ಅವಕಾಶವಿಲ್ಲ. ನೀರಾವರಿ ಭೂಮಿ ಖರೀದಿ ಮಾಡಿದವರು ಅದನ್ನು ನೀರಾವರಿ ವಿಚಾರಗಳಿಗೆ ಸಂಬಂಧಿಸಿದಂತೆಯೇ ಉಪಯೋಗ ಮಾಡಬೇಕು ಎಂದೂ ಈ ಕಾಯ್ದೆ ತಿಳಿಸುತ್ತದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಹಾಗೆಯೇ ಕೈಗಾರಿಕೆಗಳ ಸ್ಥಾಪನೆಗೆ ಬಂಜರು ಭೂಮಿ ಬಳಕೆ ಮಾಡಲಾಗುವುದು. ಕೃಷಿ ಭೂಮಿಯಲ್ಲಿ ಕೈಗಾರಿಕೆಗಳ ಸ್ಥಾಪನೆ ಇಲ್ಲ. ಇದು ಯುವಕರಿಗೆ ಉದ್ಯೋಗ ಒದಗಿಸಲಿದೆ ಎಂದೂ ಯಡಿಯೂರಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕೃಷಿ ವರ್ಗದ ಜನರ ಅಭಿವೃದ್ಧಿಗಾಗಿ ಎಪಿಎಂಸಿ ಕಾಯ್ದೆ ಜಾರಿಗೊಳಿಸಿದ್ದಾರೆ. ದೇಶದ 85% ಜನರಿಗೆ ಈ ಕಾಯ್ದೆ ತೃಪ್ತಿ ನೀಡಿದೆ. ಈ ಎಲ್ಲಾ ರೈತ ಸ್ನೇಹಿ ಯೋಜನೆಗಳ, ಕಾಯ್ದೆಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಲು ಪ್ರವಾಸ ಕೈಗೊಳ್ಳುವುದಾಗಿಯೂ ಯಡಿಯೂರಪ್ಪ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.