ನವದೆಹಲಿ: ಕೊರೋನಾ ಸಂಕಷ್ಟದ ನಡುವೆಯೇ ಇನ್ನೇನು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಲಿದೆ. ಈ ಬಾರಿಯ ದೀಪಾವಳಿಗೆ ಗೋವುಗಳ ಸೆಗಣಿಯಿಂದ ತಯಾರಿಸಲಾದ 11 ಕೋಟಿ ದೀಪಗಳನ್ನು ದೇಶದೆಲ್ಲೆಡೆ ತಯಾರಿಸಲು, ಬಳಕೆ ಮಾಡುವಂತೆ ಜನರನ್ನು ಪ್ರೇರೇಪಿಸಲು ರಾಷ್ಟ್ರೀಯ ಕಾಮಧೇನು ಆಯೋಗ ಹೊಸ ಆಲೋಚನೆಯೊಂದನ್ನು ಮಾಡಿದೆ.
ಈ ಯೋಜನೆ ದೇಶದಲ್ಲಿ ಹೈನುಗಾರಿಕೆಗೆ, ಗೋ ಸಾಕಾಣಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ದೇಶದಲ್ಲಿ ಗೋವುಗಳ ಸೆಗಣಿ ಬಳಸಿ ನಿರ್ಮಿಸಲಾದ ಸ್ವದೇಶೀ ದೀಪಗಳನ್ನು ಬಳಕೆ ಮಾಡುವಂತೆಯೂ ಜನರನ್ನು ಉತ್ತೇಜಿಸಲು ಆಯೋಗ ಮುಂದಾಗಿದೆ. ಜೊತೆಗೆ ಗ್ರಾಮೀಣ ಭಾಗದ ಹೈನುಗಾರರಲ್ಲಿ, ಮಹಿಳಾ ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳಲ್ಲಿಯೂ ಸೆಗಣಿ ಬಳಸಿ ದೀಪಗಳನ್ನು ತಯಾರಿಸುವಂತೆ ಮನವಿ ಮಾಡಿದೆ.
ಆಯೋಗ ಈ ಬಾರಿ ಗೋ ಮಯ ದೀಪಾವಳಿಯನ್ನು ದೇಶದೆಲ್ಲೆಡೆ ಆಚರಿಸಲು ಮುಂದಾಗಿದ್ದು, ಸುಮಾರು 11 ಕೋಟಿ ಸೆಗಣಿಯಿಂದ ತಯಾರಿಸಿದ ದೀಪಗಳನ್ನು ದೇಶದೆಲ್ಲೆಡೆ ಬಳಕೆ ಮಾಡುವ ನಿಟ್ಟಿನಲ್ಲಿಯೂ ಈ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದೆ.
ಈ ಬಗ್ಗೆ ಮಾತನಾಡಿರುವ ಆಯೋಗದ ಚೇರ್ಮನ್ ವಲ್ಲಭ್ ಕಠಾರಿಯಾ, ಇಂತಹ ಒಂದು ಸಮಾಜ ಸ್ನೇಹಿ, ಪರಿಸರ ಸ್ನೇಹಿ ಯೋಜನೆಯನ್ನು ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಇಡೀ ದೇಶಕ್ಕೆ ಸಂಬಂಧಿಸಿದಂತೆ ಅನುಷ್ಠಾನಕ್ಕೆ ತರಲಾಗಿದೆ. ಈ ಯೋಜನೆ ಯಶಸ್ವಿಯಾಗುವ ಭರವಸೆಯನ್ನೂ ವ್ಯಕ್ತಪಡಿಸಿರುವ ಅವರು, ಇದರಿಂದಾಗಿ ಹೈನುಗಾರರು ಅಥವಾ ಕೃಷಿಕರು ಆದಾಯ ಪಡೆದುಕೊಳ್ಳುವುದೂ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಗೋ ಶಾಲೆಗಳಿಗೂ ಆರ್ಥಿಕವಾಗಿ ಬಲಿಷ್ಠವಾಗಲು ನೆರವಾಗಲಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.