ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯು ಇಂಫಾಲ, ಚೆನ್ನೈ ಮತ್ತು ರಾಂಚಿಯಲ್ಲಿ ಮೂರು ಹೊಸ ಶಾಖೆಗಳನ್ನು ಹೊಂದಿರಲಿದೆ. ಕೇಂದ್ರ ಗೃಹ ಸಚಿವಾಲಯವು ಮೂರು ಹೊಸ ಎನ್ಐಎ ಶಾಖೆಗಳನ್ನು ಮಂಜೂರು ಮಾಡಿದೆ.
ಹೊಸ ಶಾಖೆಗಳನ್ನು ತೆರೆಯುವುದರಿಂದ ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯಾದ ಎನ್ಐಎಗೆ ಸಂಬಂಧಪಟ್ಟ ರಾಜ್ಯಗಳಲ್ಲಿನ ಯಾವುದೇ ಪರಿಸ್ಥಿತಿಗೆ ತ್ವರಿತ ಪ್ರತಿಕ್ರಿಯೆ ನೀಡಲು ಸಹಾಯಕವಾಗಲಿದೆ. ಈ ನಿರ್ಧಾರವು ಭಯೋತ್ಪಾದನೆ-ಸಂಬಂಧಿತ ಪ್ರಕರಣಗಳು ಮತ್ತು ಇತರ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳ ತನಿಖೆಯಲ್ಲಿ ಎನ್ಐಎ ಸಾಮರ್ಥ್ಯವನ್ನು ಬಲಪಡಿಸುತ್ತದೆ.
ಪ್ರಸ್ತುತ, ಎನ್ಐಎ ನ ದೆಹಲಿಯ ಪ್ರಧಾನ ಕಚೇರಿಯಲ್ಲಿನ ವಿಶೇಷ ಘಟಕಗಳಲ್ಲದೆ ಒಂಬತ್ತು ಇತರ ಶಾಖೆಗಳನ್ನು ಹೊಂದಿದೆ.
ಇತ್ತೀಚಿಗಷ್ಟೇ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನಲ್ಲಿಯೂ ಎನ್ಐಎ ಕಛೇರಿ ತೆರೆಯುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿಯನ್ನು ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.