ನವದೆಹಲಿ: ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿದ್ದ ಶಿರಾ ಮತ್ತು ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.
ಈ ಸಂಬಂಧ ಅಕ್ಟೋಬರ್ 9 ರಂದು ಅಧಿಸೂಚನೆ ಹೊರಡಿಸಲಿರುವ ಕೇಂದ್ರ ಚುನಾವಣಾ ಆಯೋಗ, ಅಕ್ಟೋಬರ್ 16 ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕವೆಂದು ತಿಳಿಸಿದೆ. ಅಕ್ಟೋಬರ್ ತಿಂಗಳ 17 ರಂದು ನಾಮಪತ್ರ ಪರಿಶೀಲನೆ ನಡೆಸಲಿರುವುದಾಗಿಯೂ ಆದೇಶದಲ್ಲಿ ತಿಳಿಸಿದೆ.
ನವೆಂಬರ್ ತಿಂಗಳ 3 ರಂದು ಎರಡೂ ಕ್ಷೇತ್ರಗಳಲ್ಲಿಯೂ ಬೈ ಎಲೆಕ್ಷನ್ ನಡೆಯಲಿದ್ದು, ನವೆಂಬರ್ 10 ರಂದು ಮತ ಎಣಿಕೆ ನಡೆಯಲಿದೆ ಎಂದೂ ಚುನಾವಣಾ ಆಯೋಗ ಈ ಸಂಬಂಧ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.