ನವದೆಹಲಿ: ಪಾಕಿಸ್ಥಾನ ಆಕ್ರಮಿತ ಪ್ರದೇಶವಾದ ‘ಗಿಲ್ಗಿಟ್-ಬಲ್ತೀಸ್ಥಾನ’ ದಲ್ಲಿ ಚುನಾವಣೆ ನಡೆಸಲು ಮುಂದಾಗಿರುವ ಪಾಕಿಸ್ಥಾನದ ಕ್ರಮವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಕಾನೂನುಬಾಹಿರವಾಗಿ ಮತ್ತು ಬಲವಂತವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದ ಮೇಲೆ ಪಾಕಿಸ್ಥಾನಕ್ಕೆ ಯಾವುದೇ ಹಕ್ಕು ಇಲ್ಲ ಎಂದು ಭಾರತ ಪ್ರತಿಪಾದಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ಈ ಬಗ್ಗೆ ಹೇಳಿಕೆಯನ್ನು ಪ್ರಕಟಿಸಿದ್ದು, 2020 ರ ನವೆಂಬರ್ 15ರಂದು ಗಿಲ್ಗಿಟ್-ಬಲ್ತಿಸ್ಥಾನದಲ್ಲಿ ಶಾಸಕಾಂಗ ಸಭೆಯ ಚುನಾವಣೆಯನ್ನು ನಡೆಸಲು ಪಾಕಿಸ್ಥಾನ ಮುಂದಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡಿರುವುದಾಗಿ ತಿಳಿಸಿದೆ.
“ಈ ಬಗ್ಗೆ ಭಾರತವು ತನ್ನ ಬಲವಾದ ಪ್ರತಿಭಟನೆಯನ್ನು ಪಾಕಿಸ್ಥಾನಕ್ಕೆ ವ್ಯಕ್ತಪಡಿಸಿದೆ. ಗಿಲ್ಗಿಟ್ ಮತ್ತು ಬಲ್ತಿಸ್ಥಾನ್ ಎಂದು ಕರೆಯಲ್ಪಡುವ ಪ್ರದೇಶಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಲಡಾಖ್ನ ಸಂಪೂರ್ಣ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗವಾಗಿದೆ” ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
“ಕಾನೂನುಬಾಹಿರವಾಗಿ ಮತ್ತು ಬಲವಂತವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳ ಮೇಲೆ ಪಾಕಿಸ್ಥಾನವು ಯಾವ ಹಕ್ಕನ್ನು ಕೂಡ ಹೊಂದಿಲ್ಲ” ಎಂದು ಅದು ಪ್ರತಿಪಾದಿಸಿದೆ.
ಗಿಲ್ಗಿಟ್-ಬಲ್ತೀಸ್ಥಾನವನ್ನು ತಕ್ಷಣ ತೊರೆಯಬೇಕು ಎಂದು ಪಾಕಿಸ್ಥಾನಕ್ಕೆ ಆಗ್ರಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.