ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಮಸೂದೆಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುತ್ತಿರುವ ವಿರೋಧ ಪಕ್ಷಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2019 ರ ವಿರೋಧ ಪಕ್ಷಗಳ ಪ್ರಣಾಳಿಕೆಯ ಮೂಲಕವೇ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಚಿವರು, 2019 ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿಗಳ ಕಾಯ್ದೆ ರದ್ದತಿ, ಕೃಷಿ ಉತ್ಪನ್ನಗಳ ರಫ್ತು ಮತ್ತು ಅಂತರರಾಜ್ಯ ವ್ಯಾಪಾರ ನಿರ್ಬಂಧಗಳನ್ನು ತೆಗೆದು ಹಾಕುವುದಾಗಿ ತಿಳಿಸಿತ್ತು. ಹಾಗಾದರೆ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಜನರಿಗೆ ಸುಳ್ಳು ಭರವಸೆ ನೀಡಿತ್ತೇ? ಎಂದು ಪ್ರಶ್ನಿಸಿದ್ದಾರೆ.
ಜೊತೆಗೆ 2019 ರ ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಗಳನ್ನು ತಮ್ಮ ಟ್ವೀಟ್ನಲ್ಲಿ ಹಂಚಿಕೊಂಡಿದ್ದು, ಆ ಮೂಲಕ ಪ್ರತಿಪಕ್ಷಗಳಿಗೆ, ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ಗೆ ಟಾಂಗ್ ನೀಡಿದ್ದಾರೆ. ಆಗ ಕಾಂಗ್ರೆಸ್ ನೀಡಿದ್ದ ಆಶ್ವಾಸನೆಗಳ ವಿರುದ್ಧ ಅವರೇ ಈಗ ಜನರನ್ನು ಎತ್ತಿಕಟ್ಟುತ್ತಿರುವಂತೆ ತೋರುತ್ತಿದೆ ಎಂದೂ ಅವರು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಿಗೆ ಇಂತಹ ಸಲಹೆಗಳನ್ನು ಯಾರು ನೀಡುತ್ತಿದ್ದಾರೆ ಎಂದು ಆಶ್ಚರ್ಯವಾಗುತ್ತಿದೆ ಎಂದೂ ಕಾಂಗ್ರೆಸ್ ಪಕ್ಷವನ್ನು ಅಣಕಿಸಿದ್ದಾರೆ.
ಒಟ್ಟಿನಲ್ಲಿ ಕಾಂಗ್ರೆಸ್ ತಾನು ಚುನಾವಣೆಗೂ ಮುನ್ನ ಪ್ರಣಾಳಿಕೆಯ ಮೂಲಕ ಜನರಿಗೆ ನೀಡಿದ್ದ ಭರವಸೆಗಳ ವಿರುದ್ಧವೇ ಪ್ರತಿಭಟನೆ ನಡೆಸುತ್ತಿದೆ, ಜನರ ಮುಂದೆ ಮತ್ತೆ ಬೆತ್ತಲಾಗಿದೆ.
Did @INCIndia give a false promise during the Lok Sabha 2019 elections or are they provoking people now by asking states to bypass the central legislation? Wonder who advises their President?
— Nirmala Sitharaman (@nsitharaman) September 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.