ನವದೆಹಲಿ: ಪತ್ರಿಕಾ ಪ್ರಕಟಣೆ ಮತ್ತು ಇತರ ಮಾಹಿತಿಗಳನ್ನು ಇಂಗ್ಲೀಷ್, ಹಿಂದಿ ಮತ್ತು ಉರ್ದು ಜೊತೆಗೆ ಸಂಸ್ಕೃತದಲ್ಲೂ ಕೂಡ ಪ್ರಕಟಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಈ ನಿರ್ದೇಶನದ ಅನುಸಾರವಾಗಿ ಸಂಸ್ಕೃತದಲ್ಲಿ ಮೊದಲ ಪ್ರಕಟಣೆ ಹೊರಬಿದ್ದಿದೆ.
ಮುಖ್ಯಮಂತ್ರಿ ಕಾರ್ಯಾಲಯದ ಅನುಸಾರ, ಎಲ್ಲಾ ಮಾಹಿತಿಗಳನ್ನು ಸಂಸ್ಕೃತದಲ್ಲಿ ಪ್ರಕಟಿಸಲಾಗುತ್ತಿದೆ. ಸಂಸ್ಕೃತದಲ್ಲಿರುವ ಪತ್ರಿಕಾ ಪ್ರಕಟಣೆಯನ್ನು ಸೆಪ್ಟೆಂಬರ್ 26ರಂದು ಸಂಸ್ಕೃತದಲ್ಲಿ ಹೊರಡಿಸಲಾಗಿದೆ. ಕೋವಿಡ್-19ಗೆ ಸಂಬಂಧಿಸಿದ ಪತ್ರಿಕಾ ಪ್ರಕಟಣೆ ಇದಾಗಿದೆ.
“ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ದೇಶನದಂತೆ, ಪತ್ರಿಕಾ ಪ್ರಕಟಣೆಗಳನ್ನು ಸಂಸ್ಕೃತದಲ್ಲಿ ಹೊರಡಿಸಲಾಗುತ್ತಿದೆ.ಕೊರನಾ ಪರಿಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಸಭೆಯ ದೈನಂದಿನ ಪತ್ರಿಕಾ ಪ್ರಕಟಣೆಯನ್ನು ಕೂಡ ಸಂಸ್ಕೃತದಲ್ಲಿ ಹೊರಡಿಸಲಾಗುತ್ತಿದೆ” ಎಂದು ಸಿಎಂಒ ಟ್ವಿಟರ್ ಮೂಲಕ ತಿಳಿಸಿದೆ.
मुख्यमंत्री श्री @myogiadityanath जी के निर्देशानुसार शासकीय प्रेस विज्ञप्तियां अब संस्कृत भाषा में भी निर्गत की जाएंगी।
मुख्यमंत्री जी द्वारा कोविड-19 के दृष्टिगत प्रतिदिन की जा रही समीक्षा बैठक की आज की संस्कृत भाषा में निर्गत प्रेस विज्ञप्ति.. pic.twitter.com/601r7dGLYV
— CM Office, GoUP (@CMOfficeUP) September 26, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.