ನವದೆಹಲಿ: 28 ವರ್ಷಗಳ ಹಿಂದಿನ ಬಾಬ್ರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಲಕ್ನೋ ವಿಶೇಷ ಸಿಬಿಐ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಬಾಬ್ರಿ ಧ್ವಂಸ ಘಟನೆ ಪೂರ್ವನಿಯೋಜಿತವಲ್ಲ. ಹೀಗಾಗಿ ಆರೋಪಿಗಳು ತಪ್ಪಿತಸ್ಥರಲ್ಲ ಎಂದು ಹೇಳಿದೆ.
ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸೇರಿದಂತೆ 32 ಮಂದಿ ಆರೋಪಿಗಳು ನಿರ್ದೋಷಿಗಳು ಎಂದು ಲಕ್ನೊ ಸಿಬಿಆ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಈ ಮೂಲಕ 32 ಮಂದಿ ಆರೋಪದಿಂದ ಮುಕ್ತರಾಗಿದ್ದಾರೆ.
ಘಟನೆ ಪೂರ್ವ ನಿಯೋಜಿತ ಕೃತ್ಯವಲ್ಲ ಎಂಬ ತೀರ್ಪು ಮಹತ್ವದ್ದಾಗಿದೆ.
ಬಾಬ್ರಿ ಧ್ವಂಸ ಪ್ರಕರಣ ಒಂದು ಆಕಸ್ಮಿಕ ಘಟನೆಯಾಗಿದೆ, ಇದು ಪೂರ್ವ ನಿಯೋಜಿತ ಕೃತ್ಯವಲ್ಲ. ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷಿಗಳು ಇಲ್ಲ ಎಂದು ನ್ಯಾಯಮೂರ್ತಿ ಯಾದವ್ ತೀರ್ಪು ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.
ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಮೊಘಲ್ ದೊರೆ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಬಾಬ್ರಿಯನ್ನು 1992 ಡಿಸೆಂಬರ್ನಲ್ಲಿ ಕರಸೇವಕರು ಧ್ವಂಸ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆಯನ್ನು ನಡೆಸಲಾಗಿದ್ದು, ಇಂದು ತೀರ್ಪನ್ನು ಪ್ರಕಟ ಮಾಡಲಾಗಿದೆ.
BJP and VHP top leaders acquitted from the the Babri Masjid demolition case. #BabriMasjid #BabriMasjidDemolition #BabriVerdict pic.twitter.com/Aq6zZjcdNV
— Bar & Bench (@barandbench) September 30, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.