ನವದೆಹಲಿ: ಬಹುನಿರೀಕ್ಷಿತ ಬಾಬ್ರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸಿಬಿಐ ನ್ಯಾಯಾಲಯ ಇಂದು ತೀರ್ಪು ಪ್ರಕಟ ಮಾಡಿದೆ. ಪ್ರಕರಣದ ಎಲ್ಲಾ ಆರೋಪಿಗಳನ್ನು ನಿರ್ದೋಷಿಗಳು ಎಂದು ನ್ಯಾಯಾಲಯ ಘೋಷಣೆ ಮಾಡಿದೆ.
ಇಂದಿನ ತೀರ್ಪು ಸತ್ಯ ಮತ್ತು ನ್ಯಾಯಕ್ಕೆ ಸಂದ ಜಯ ಎಂದು ವಿಶ್ವ ಹಿಂದೂ ಪರಿಷತ್ ಅಭಿಪ್ರಾಯಿಸಿದೆ.
ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಅಲೋಕ್ ಕುಮಾರ್ ಅವರು, “ಕೊನೆಗೂ ನ್ಯಾಯ ಮತ್ತು ಸತ್ಯಕ್ಕೆ ಜಯವಾಗಿದೆ. ಸುಪ್ರೀಂಕೋರ್ಟ್ ಅಯೋಧ್ಯೆ ಭೂಮಿಯ ಮಾಲೀಕತ್ವದ ಸಮಸ್ಯೆಯನ್ನು ಬಗೆಹರಿಸಿತು ಮತ್ತು ಇಂದಿನ ತೀರ್ಪು ಷಡ್ಯಂತ್ರದ ಸಿದ್ಧಾಂತವನ್ನು ಭೇದಿಸಿದೆ. ಬಾಬ್ರಿ ಧ್ವಂಸ ಪ್ರಕರಣ ಆ ಕ್ಷಣ ಆಕಸ್ಮಿಕವಾಗಿ ಸಂಭವಿಸಿದೆ. ಈ ಘಟನೆ ಸ್ವಯಂ ಪ್ರೇರಿತ ಜನರಿಂದ ನಡೆಯಿತೇ ಹೊರತು ಇದರಲ್ಲಿ ಯಾವುದೇ ನಾಯಕರು ಭಾಗಿಯಾಗಿರಲಿಲ್ಲ. ಪ್ರಸ್ತುತ ಇಡೀ ದೇಶವೇ ಒಗ್ಗಟ್ಟಿನಿಂದ ದೇಶದ ಪ್ರಗತಿಯತ್ತ ಮುಂದೆ ನೋಡಬೇಕು ಮತ್ತು ಭೂತಕಾಲವನ್ನು ನೋಡುವುದನ್ನು ನಿಲ್ಲಿಸಬೇಕು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಲ್ಲಾ 32 ಆರೋಪಿಗಳನ್ನು ಇಂದು ಲಕ್ನೋ ವಿಶೇಷ ಸಿಬಿಐ ನ್ಯಾಯಾಲಯ ಖುಲಾಸೆ ಮಾಡಿದೆ. ಆರೋಪಿಗಳಲ್ಲಿ ಬಿಜೆಪಿಯ ಭೀಷ್ಮ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾಭಾರತಿ ಮುಂತಾದ ದಿಗ್ಗಜರ ಇದ್ದರು. ಇಂದಿನ ತೀರ್ಪು ಇವರೆಲ್ಲರಿಗೂ ನಿರಾಳತೆಯನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.