ಬೆಂಗಳೂರು: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಈ ಕೃತ್ಯ ಪೂರ್ವಯೋಜಿತವಲ್ಲ. ಎಲ್ಲಾ 32 ಆರೋಪಿಗಳೂ ನಿರ್ದೋಷಿಗಳು ಎಂದು ತಿಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, ಇದು ಸತ್ಯಕ್ಕೆ ಸಿಕ್ಕ ಜಯವಾಗಿದೆ. ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾಭಾರತಿ ಮೊದಲಾದ 32 ಜನರಿಗೆ ಇದರಿಂದ ನ್ಯಾಯ ದೊರೆತಿದೆ ಎಂದು ಹೇಳಿದ್ದಾರೆ. ಅಲ್ಲದೆ ಈ ಹೋರಾಟದ ಸಂದರ್ಭದಲ್ಲಿ ತಾನೂ ಪ್ರತ್ಯಕ್ಷ ಭಾಗಿಯಾಗಿದ್ದು, ನ್ಯಾಯಾಲಯದ ಈ ತೀರ್ಪು ತಮಗೆ ಸಂತಸ ನೀಡಿರುವುದಾಗಿ ತಿಳಿಸಿದ್ದಾರೆ.
ಅಡ್ವಾಣಿ ಜಿ ಅಂದು ಮಾಡಿದ ಭಾಷಣ ನಮಗೆಲ್ಲಾ ಆ ಸಂದರ್ಭದಲ್ಲಿ ಪ್ರೇರಣಾದಾಯಕವಾಗಿತ್ತು. ಅಂತಹ ಮಹಾನ್ ವ್ಯಕ್ತಿಗೆ 28 ವರ್ಷಗಳ ಬಳಿಕ ನ್ಯಾಯ ದೊರೆತಿದೆ. ಆ ಮೂಲಕ ನ್ಯಾಯಯುತ ಹೋರಾಟಗಾರರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬುದು ಸಾಬೀತಾದಂತಾಗಿದೆ ಎಂದೂ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.