ನವದೆಹಲಿ: ಅಯೋಧ್ಯೆ ಚಳುವಳಿಯ ನೇತೃತ್ವ ವಹಿಸಿದ್ದ ಲಾಲ್ ಕೃಷ್ಣ ಅಡ್ವಾಣಿ ಅವರು ಬುಧವಾರ 1992 ರ ಡಿಸೆಂಬರ್ 6 ರಂದು ಬಾಬ್ರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸಿಬಿಐ ನ್ಯಾಯಾಲಯ 32 ಆರೋಪಿಗಳನ್ನು ಖುಲಾಸೆಗೊಳಿಸಿ ನೀಡಿದ ತೀರ್ಪನ್ನು ಬಿಜೆಪಿ ಧುರೀಣ ಎಲ್.ಕೆ ಅಡ್ವಾಣಿ ಅವರು ಶ್ಲಾಘಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿ ಅಡ್ವಾಣಿ ಅವರು ನ್ಯಾಯಾಲಯದ ಆದೇಶವನ್ನು ಆಲಿಸಿದ್ದಾರೆ, “ಈ ತೀರ್ಪು ನನ್ನ ವೈಯಕ್ತಿಕ ಮತ್ತು ಬಿಜೆಪಿಯ ನಂಬಿಕೆ ಮತ್ತು ರಾಮ ಜನ್ಮಭೂಮಿ ಚಳವಳಿಯ ಬಗೆಗಿನ ನಮ್ಮ ಬದ್ಧತೆಯನ್ನು ಸಮರ್ಥಿಸುತ್ತದೆ” ಎಂದು ಹೇಳಿದ್ದಾರೆ.
“ನನ್ನ ಪಕ್ಷದ ಕಾರ್ಯಕರ್ತರು, ಮುಖಂಡರು, ಸಂತರು ಮತ್ತು ನಿಸ್ವಾರ್ಥವಾಗಿ ಪಾಲ್ಗೊಂಡ ಮತ್ತು ತಮ್ಮ ತ್ಯಾಗದ ಮೂಲಕ ಅಯೋಧ್ಯೆ ಚಳವಳಿಯ ಸಮಯದಲ್ಲಿ ನನಗೆ ಶಕ್ತಿ ಮತ್ತು ಬೆಂಬಲವನ್ನು ನೀಡಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ” ಎಂದು ಅಡ್ವಾಣಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಂಟಿ ಪ್ರಯತ್ನಗಳನ್ನು ಪಕ್ಷದ ಮುಖಂಡರು, ವೀಕ್ಷಕರು ಮತ್ತು ಅವರ ಕಾನೂನು ತಂಡಕ್ಕೂ ಅವರು ಧನ್ಯವಾದಗಳನ್ನು ಅರ್ಪಿಸಿದರು. ರಾಮ ಮಂದಿರಕ್ಕೆ ಅಯೋಧ್ಯೆಯಲ್ಲಿ ಅಡಿಪಾಯ ಹಾಕುವ ಸಮಾರಂಭಕ್ಕೆ ನಡೆಯಲು ಈ ಚಳುವಳಿ ಕಾರಣವಾಯಿತು. ಭವ್ಯವಾದ ಮತ್ತು ಸುಂದರವಾದ ರಾಮ ದೇವಾಲಯದ ನಿರ್ಮಾಣಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.