ಬೆಂಗಳೂರು: ಕೊರೋನಾ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಮೃತಪಟ್ಟ ಅನುದಾನಿತ ಶಾಲಾ ಶಿಕ್ಷಕರ ಕುಟುಂಬಕ್ಕೆ 30 ಲಕ್ಷ ರೂ. ಗಳ ವಿಮೆ ಪರಿಹಾರವನ್ನು ನೀಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.
ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ಕೊರೋನಾ ವಾರಿಯರ್ಸ್ ರೀತಿಯಲ್ಲಿಯೇ ರಾಜ್ಯದ ಶಿಕ್ಷಕರೂ ಸೇವೆ ಸಲ್ಲಿಸುತ್ತಿದ್ದಾರೆ. ಅನುದಾನಿತ ಶಾಲೆಗಳ ಶಿಕ್ಷಕರನ್ನೂ ರಾಜ್ಯ ಸರ್ಕಾರ ಕೊರೋನಾ ಸೇವೆಗೆ ಬಳಸಿಕೊಳ್ಳುತ್ತಿದೆ. ಕರ್ತವ್ಯದ ಅವಧಿಯಲ್ಲೇ ಕೊರೋನಾಗೆ ಶಿಕ್ಷಕರು ಬಲಿಯಾದರೆ ಅವರ ಕುಟುಂಬಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಈ ಸಂಬಂಧ ರಾಜ್ಯದ ಆರ್ಥಿಕ ಇಲಾಖೆ ಈಗಾಗಲೇ ಆದೇಶವನ್ನೂ ಹೊರಡಿಸಿದ್ದು, ಮೃತಪಟ್ಟ ಶಿಕ್ಷಕರಲ್ಲಿ ಕೊರೋನಾ ಕರ್ತವ್ಯಕ್ಕೆ ನಿಯೋಜನೆಗೊಂಡ ಆದೇಶದ ಪ್ರತಿ ಇದ್ದಲ್ಲಿ ಈ ವಿಮಾ ಪರಿಹಾರ ನೀಡಲಾಗುವುದು ಎಂದು ತಿಳಿಸಿದೆ. ಈ ಸಂಬಂಧ ಮೃತರಿಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಕ್ಷಮ ಪ್ರಾಧಿಕಾರದ ಮುಖ್ಯಸ್ಥರು ಸಲ್ಲಿಸಬೇಕೆಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.