ಲಕ್ನೋ: ಕೊರೋನಾ ಸೋಂಕಿತರನ್ನು ಪತ್ತೆ ಮಾಡಲು ಒಂದು ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದ ದೇಶದ ಮೊದಲ ರಾಜ್ಯ ಎಂಬ ಕೀರ್ತಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಾರಥ್ಯದ ಉತ್ತರ ಪ್ರದೇಶ ಭಾಜನವಾಗಿದೆ.
ಈ ಬಗ್ಗೆ ಮಾತನಾಡಿರುವ ಯೋಗಿ, ಇದೊಂದು ದೊಡ್ಡ ಸಾಧನೆಯಾಗಿದೆ. ಕಳೆದ 45 ದಿನಗಳಿಂದ ರಾಜ್ಯದಲ್ಲಿ ಪ್ರತಿನಿತ್ಯ 1.5 ಲಕ್ಷ ಪರೀಕ್ಷೆಗಳನ್ನು ನಡೆಸುವ ಮೂಲಕ ಸೋಂಕು ಪತ್ತೆ, ಚಿಕಿತ್ಸೆ ನೀಡಲು, ಆ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ವರದಿಗಳನ್ನು ಬಿಡುಗಡೆ ಮಾಡಿದ್ದು, ಈ ವರೆಗೆ ರಾಜ್ಯದಲ್ಲಿ ಸುಮಾರು 1,00,98,896 ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದೆ.
ಈ ಪೈಕಿ 42% ಗಳಷ್ಟು ಪರೀಕ್ಷೆಯನ್ನು ಆರ್ಟಿಪಿಸಿಆರ್ ಪರೀಕ್ಷೆಯ ಮೂಲಕ ನಡೆಸಲಾಗಿದೆ ಎಂದೂ ಆದಿತ್ಯನಾಥ್ ತಿಳಿಸಿದ್ದಾರೆ. ದೇಶದಲ್ಲಿ ಎಲ್ಲಾ ರಾಜ್ಯಗಳಿಗೂ ಸಂಬಂಧಿಸಿದಂತೆ ನಡೆಸಲಾದ ಒಟ್ಟಾರೆ ಪರೀಕ್ಷೆಯಲ್ಲಿ 13.6% ರಷ್ಟು ಪಾಲು ಉತ್ತರ ಪ್ರದೇಶದ್ದೇ ಆಗಿದೆ ಎಂದೂ ಅವರು ಹೇಳಿದ್ದಾರೆ. ಕಳೆದ ಕೆಲ ದಿನಗಳಿಂದ 1.5 ಲಕ್ಷ ಪರೀಕ್ಷೆಗಳು ದಿನಕ್ಕೆ ನಡೆಯುತ್ತಿದ್ದು, ಈ ರಾಜ್ಯದಲ್ಲಿ ಸಾವಿನ ಪ್ರಮಾಣ 4% ರಷ್ಟು ಇರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಇನ್ನು ಈ ಸಂಬಂಧ ಮಾಹಿತಿ ನೀಡಿರುವ ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಅಲೋಕ್ ಕುಮಾರ್, ರಾಜ್ಯದಲ್ಲಿ ಸೋಂಕು ಹರಡುವ ಮತ್ತು ಮರಣ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ 25% ದಷ್ಟು ಸೋಂಕಿತರ ಪ್ರಮಾಣ ಕಡಿಮೆಯಾಗಿದೆ. 85.50% ದಷ್ಟು ಸೋಂಕಿತರು ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.