ಹುಬ್ಬಳ್ಳಿ: ಯುಪಿಎಸ್ಸಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿ ಮತ್ತು ಯಶವಂತಪುರದ ನಡುವೆ ವಿಶೇಷ ರೈಲು ಸೇವೆ ಒದಗಿಸಲು ನೈರುತ್ಯ ರೈಲ್ವೆ ತೀರ್ಮಾನ ತೆಗೆದುಕೊಂಡಿದೆ.
ಅಕ್ಟೋಬರ್ 3 ರಂದು ಹುಬ್ಬಳ್ಳಿಯಿಂದ ಈ ರೈಲು ಕಾರ್ಯಾಚರಣೆ ನಡೆಸಲಿದೆ. ನಗರದಿಂದ ಸಂಜೆ 5 ಗಂಟೆಗೆ ಹೊರಡಲಿರುವ ರೈಲು ಗದಗ, ಬಾಣಾಪುರ, ಕೊಪ್ಪಳ, ಹೊಸಪೇಟೆ, ತೋರಣಗಲ್ಲ, ಬಳ್ಳಾರಿ, ರಾಯದುರ್ಗ, ಚಳ್ಳಕೆರೆ, ಚಿತ್ರದುರ್ಗ, ಚಿಕ್ಕಜಾಜೂರು, ಹೊಸದುರ್ಗ, ಅಜ್ಜಂಪುರ, ಬೀರೂರು, ಕಡೂರು, ಅರಸೀಕೆರೆ, ತಿಪಟೂರು, ತುಮಕೂರು ಮಾರ್ಗವಾಗಿ ಯಶವಂತಪುರ ತಲುಪಲಿದೆ ಎಂದು ಇಲಾಖೆ ಈ ಸಂಬಂಧ ಮಾಹಿತಿ ನೀಡಿದೆ. ಅಕ್ಟೋಬರ್ 4 ರಂದು ಬೆಳಗ್ಗೆ 6.45 ಕ್ಕೆ ಈ ರೈಲು ಬೆಂಗಳೂರು ತಲುಪಲಿದೆ ಎಂದೂ ಇಲಾಖೆ ತಿಳಿಸಿದೆ.
ಅಂತೆಯೇ ಅಕ್ಟೋಬರ್ 4 ರಂದು ರಾತ್ರಿ 8 ಗಂಟೆಗೆ ಈ ರೈಲು ಯಶವಂತಪುರದಿಂದ ಮತ್ತೆ ಹುಬ್ಬಳ್ಳಿಯತ್ತ ಸಂಚಾರ ಬೆಳೆಸಲಿದೆ. ಅಕ್ಟೋಬರ್ 5 ರೀದು ಬೆಳಗ್ಗೆ 8.45 ಗಂಟೆಗೆ ಈ ರೈಲು ನಗರಕ್ಕೆ ಬರಲಿದೆ ಎಂದೂ ನೈರುತ್ಯ ರೈಲ್ವೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.