ಲಕ್ನೋ: ನಿಷೇಧಾಜ್ಞೆಯನ್ನೂ ಉಲ್ಲಂಘಿಸಿ ಹತ್ರಾಸ್ ಅತ್ಯಾಚಾರ ಸಂತ್ರಸ್ಥೆಯನ್ನು ಭೇಟಿಯಾಗಲು ತೆರಳಿ ದೊಡ್ಡ ಮಟ್ಟದಲ್ಲಿ ಗದ್ದಲವೆಬ್ಬಿಸಿದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ 201 ಮಂದಿಯ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಗ್ರೇಟರ್ ನೋಯ್ಡಾದ ಇಕೋಟೆಕ್ ಒನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಎಫ್ಐಆರ್ನಲ್ಲಿ ಇವರ ವಿರುದ್ಧ ಹಲವಾರು ಗಂಭೀರ ಸೆಕ್ಷನ್ ಅಡಿಯಲ್ಲಿ ಅರೋಪ ಹೊರಿಸಲಾಗಿದೆ. ಗೌತಮ್ ಬುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗೌತಮ್ ಬುದ್ಧ ನಗರ ನಗರ ಪೊಲೀಸ್ ಆಯುಕ್ತರಿಂದ ಗುರುವಾರ ಬಂದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಜಯ್ ಸಿಂಗ್ ಅವರು ನಿಷೇಧಾಜ್ಞೆಗಳನ್ನು ಉಲ್ಲಂಘಿಸಿದ್ದಾರೆ. ಸಾಂಕ್ರಾಮಿಕ ರೋಗ ಕಾಯ್ದೆಯನ್ನು ಉಲ್ಲಂಘಿಸಿ ಸಾಮಾನ್ಯ ಜನರ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದ್ದಾರೆ.
ಲಲ್ಲು, ದೀಪೇಂದ್ರ ಸಿಂಗ್ ಹೂಡಾ, ಪಿ.ಎಲ್.ಪುನಿಯಾ, ಸಚಿನ್ ಪೈಲೆಟ್, ಗೌತಮ್ ಬುದ್ಧ ನಗರ ಕಾಂಗ್ರೆಸ್ ಅಧ್ಯಕ್ಷ ಅಜಯ್ ಚೌಧರಿ, ನೋಯ್ಡಾ ಮಹಾನಗರ ಕಾಂಗ್ರೆಸ್ ಅಧ್ಯಕ್ಷ ಶಹಾಬುದ್ದೀನ್, ಉತ್ತರ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೀರೇಂದ್ರ ಸಿಂಗ್ ಗುಡ್ಡು ಮತ್ತು ಜಿತಿನ್ ಪ್ರಸಾದ್ ಸೇರಿದಂತೆ 153 ಕಾಂಗ್ರೆಸ್ಸಿಗರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 50 ಇತರರನ್ನು ಕೂಡ ಎಫ್ಐಆರ್ನಲ್ಲಿ ಸೇರಿಸಲಾಗಿದೆ.
ಐಪಿಸಿಯ ಸೆಕ್ಷನ್ 188 (ನಿಷೇಧಾಜ್ಞೆ, ಸಿಆರ್ಪಿಸಿಯ ಸೆಕ್ಷನ್ 144 ರ ಉಲ್ಲಂಘನೆ), ಐಪಿಸಿ ಸೆಕ್ಷನ್ 270 ಮತ್ತು ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ಕಾಯ್ದೆ -1869 ರ ಸೆಕ್ಷನ್ 4 (ಸಾಂಕ್ರಾಮಿಕ ಕಾಯಿಲೆಯ ಸಮಯದಲ್ಲಿ ಸಾಮಾನ್ಯ ಮನುಷ್ಯನ ಜೀವಕ್ಕೆ ಅಪಾಯವನ್ನುಂಟು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.