ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಈ ಇಬ್ಬರು ಸ್ಮರಣೀಯ ವ್ಯಕ್ತಿಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಗಾಂಧೀಜಿ ಅವರ ತತ್ವಗಳು ಸಮಾಜದಲ್ಲಿ ಸಾಮರಸ್ಯದ ಭಾವ ಮೂಡಿಸುತ್ತದೆ. ವಿಶ್ವದ ಕಲ್ಯಾಣಕ್ಕೆ ದಾರಿ ತೋರಿಸುತ್ತದೆ ಎಂದು ತಿಳಿಸಿದ್ದಾರೆ. ಶಾಸ್ತ್ರೀಜಿ ಬಗ್ಗೆಗೂ ಟ್ವೀಟ್ ಮಾಡಿರುವ ಅವರು, ಶಾಸ್ತ್ರೀಜಿ ಅವರು ಭಾರತದ ಹೆಮ್ಮೆಯ ಪುತ್ರ. ದೇಶಕ್ಕಾಗಿ ಸಮರ್ಪಣಾ ಭಾವದಿಂದ ದುಡಿದವರು. ಹಸಿರು ಕ್ರಾಂತಿ, ಶ್ವೇತ ಕ್ರಾಂತಿ, ನಾಯಕತ್ವ ಇಂದಿಗೂ ನಮ್ಮೆಲ್ಲರಿಗೂ ಪ್ರೇರಣೆ ಎಂದು ತಿಳಿಸಿದ್ದಾರೆ.
“The Mahatma’s life was his message. Gandhiji sacrificed his life for the upliftment of the downtrodden, and the empowerment of Indians.” — President Kovind writes homage to Mahatma Gandhi on #GandhiJayanti https://t.co/s2VohrHhap @HindustanTimes
— President of India (@rashtrapatibhvn) October 2, 2020
Today we remember former Prime Minister Lal Bahadur Shastri on his birth anniversary. A great son of India, he served our nation with exceptional dedication. His fundamental role in the Green Revolution, the White Revolution and wartime leadership continue to inspire the nation.
— President of India (@rashtrapatibhvn) October 2, 2020
ಪ್ರಧಾನಿ ಮೋದಿ ಅವರು ಗಾಂಧೀಜಿ ಸ್ಮಾರಕವಿರುವ ರಾಜ್ಘಾಟ್ ಮತ್ತು ಶಾಸ್ತ್ರೀಜಿ ಅವರ ಸ್ಮಾರಕವಿರುವ ವಿಜಯ್ ಘಾಟ್ಗಳಿಗೆ ತೆರಳಿ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಗಾಂಧೀಜಿ ಅವರನ್ನು ಸ್ಮರಿಸಿರುವ ಮೋದಿ, ಪ್ರಿಯ ಬಾಪೂಜಿ ಅವರಿಗೆ ನಮನ ಸಲ್ಲಿಸುತ್ತೇನೆ. ಅವರ ಬದುಕು ಮತ್ತು ಚಿಂತನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಗಾಂಧೀಜಿ ಅವರ ಆದರ್ಶಗಳು ನಮ್ಮೆಲ್ಲರಿಗೂ ದಾರಿದೀಪವಾಗಲಿ ಎಂದು ತಿಳಿಸಿದ್ದಾರೆ.
We bow to beloved Bapu on Gandhi Jayanti.
There is much to learn from his life and noble thoughts.
May Bapu’s ideals keep guiding us in creating a prosperous and compassionate India. pic.twitter.com/wCe4DkU9aI
— Narendra Modi (@narendramodi) October 2, 2020
ಅಂತೆಯೇ ಇದೇ ಸಂದರ್ಭದಲ್ಲಿ ಶಾಸ್ತ್ರೀಜಿ ಅವರಿಗೂ ನಮನ ಸಲ್ಲಿಸಿ ಮಾತನಾಡಿದ ನಮೋ, ಶಾಸ್ತ್ರೀಜಿ ಅವರು ದೃಢ ಮತ್ತು ಸ್ಥಿರ ನಿಲುವಿನ ವ್ಯಕ್ತಿಯಾಗಿದ್ದರು. ರಾಷ್ಟ್ರದ ಅಭ್ಯುದಯಕ್ಕಾಗಿ ಬದುಕು ಸಾಗಿಸಿದವರು. ಸರಳ, ಮಾದರಿ ವ್ಯಕ್ತಿತ್ವ ಹೊಂದಿದ್ದವರು. ದೇಶಕ್ಕಾಗಿ ಅವರು ಮಾಡಿದ ಎಲ್ಲಾ ಸೇವೆಗಳನ್ನೂ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದಾಗಿ ತಿಳಿಸಿದರು.
Lal Bahadur Shastri Ji was humble and firm.
He epitomised simplicity and lived for the welfare of our nation.
We remember him on his Jayanti with a deep sense of gratitude for everything he has done for India. pic.twitter.com/bTV6886crz
— Narendra Modi (@narendramodi) October 2, 2020
ಇನ್ನು ಈ ಸುಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಈ ಇಬ್ಬರೂ ಗಣ್ಯರಿಗೆ ನಮನ ಸಲ್ಲಿಸಿದ್ದಾರೆ. ಈ ಇಬ್ಬರೂ ಗಣ್ಯರ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಾಸ್ತ್ರೀಜಿ ಅವರು ಹಿರಿಯ ಸ್ವಾತಂತ್ರ್ಯ ಹೋರಾಟಗಾರರು. ಪ್ರಾಮಾಣಿಕತೆ ಮತ್ತು ದೇಶಭಕ್ತಿಯ ಸಾಕಾರ ರೂಪದಂತಿದ್ದ ಶಾಸ್ತ್ರೀಜಿ ಅವರಿಗೆ ಅನಂತ ನಮನಗಳನ್ನು ಸಲ್ಲಿಸೋಣ ಎಂದು ಹೇಳಿದ್ದಾರೆ. ಅವರ ಜೀವನ, ಮೌಲ್ಯಗಳು ನಮಗೆ ಆದರ್ಶ ಎಂದೂ ಯಡಿಯೂರಪ್ಪ ತಿಳಿಸಿದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಪ್ರಾಮಾಣಿಕತೆ ಮತ್ತು ದೇಶಭಕ್ತಿಗಳ ಸಾಕಾರ ರೂಪದಂತಿದ್ದ ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮಜಯಂತಿಯಂದು ಅವರಿಗೆ ನಮ್ಮ ಅನಂತ ನಮನಗಳನ್ನು ಸಲ್ಲಿಸೋಣ. ಅವರ ಮೌಲ್ಯಯುತ ಸಾರ್ವಜನಿಕ ಜೀವನ, ಸಿದ್ದಾಂತ, ಸಾಧನೆಗಳು ಸದಾ ಆದರ್ಶಪ್ರಾಯವಾಗಿವೆ. #LalBahadurShastriJayanti pic.twitter.com/WwJcKIpnyC
— B.S. Yediyurappa (@BSYBJP) October 2, 2020
ಗಾಂಧೀಜಿ ಅವರಿಗೂ ನಮನ ಸಲ್ಲಿಸಿರುವ ಯಡಿಯೂರಪ್ಪ, ಅವರ ಕನಸುಗಳನ್ನು ಸಾಕಾರಗೊಳಿಸಲು ಸಂಕಲ್ಪ ತೊಡೋಣ. ಆ ಮೂಲಕ ಸತ್ಯ, ಅಹಿಂಸೆಯ ಪ್ರತಿಪಾದಕರಾದ ಗಾಂಧೀಜಿ ಅವರಿಗೆ ಗೌರವ ಸಲ್ಲಿಸೋಣ ಎಂದು ತಿಳಿಸಿದ್ದಾರೆ.
ಸತ್ಯ, ಅಹಿಂಸೆಗಳ ನಂದಾದೀಪದ ಬೆಳಕಿನಲ್ಲಿ ಸತ್ಯಾಗ್ರಹದ ದಾರಿಯಲ್ಲಿ ನಡೆದು, ಭಾರತಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜಯಂತಿಯಂದು ಅವರಿಗೆ ನಮ್ಮ ಅನಂತ ಪ್ರಣಾಮಗಳನ್ನು ಸಲ್ಲಿಸೋಣ. ಸ್ವಚ್ಛತೆ, ಸ್ವಾವಲಂಬಿತ್ವಗಳ ಪ್ರತಿಪಾದಕರಾಗಿದ್ದ ಗಾಂಧೀಜಿಯವರ ಕನಸನ್ನು ನನಸು ಮಾಡುವ ಸಂಕಲ್ಪ ತೊಡೋಣ.#GandhiJayanti pic.twitter.com/Y5ia8KHL0M
— B.S. Yediyurappa (@BSYBJP) October 2, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.