ನವದೆಹಲಿ: ಬ್ಯಾಂಕ್ಗಳು ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುವಂತಾಗಲು ಪ್ರಾದೇಶಿಕ ಭಾಷೆ ತಿಳಿದಿರುವ, ಮಾತನಾಡುವ ಮತ್ತು ಅರ್ಥ ಮಾಡಿಕೊಳ್ಳುವ ಕೇಡರ್ (ಅಧಿಕಾರಿಗಳ ಬ್ಯಾಚ್) ತಂಡ ಸಿದ್ಧಪಡಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕುಗಳಿಗೆ ನಿರ್ದೇಶನ ನೀಡಿದ್ದಾರೆ.
ಹಲವು ಸಂದರ್ಭಗಳಲ್ಲಿ ಜನರಿಗೆ ಹಿಂದಿ ಭಾಷೆಯೂ ತಿಳಿಯುವುದಿಲ್ಲ. ಈ ಸಂದರ್ಭದಲ್ಲಿ ವ್ಯವಹಾರ ಕಷ್ಟವಾಗುತ್ತದೆ. ಆದ್ದರಿಂದ ಬ್ಯಾಂಕ್ ಕಾರ್ಯನಿರ್ವಾಹಕರು ತಾವಿರುವ ಪ್ರದೇಶದ ಭಾಷೆಯನ್ನು ಕಲಿಯುವ ಮೂಲಕ ಜನರಿಗೆ ವ್ಯವಹಾರ ನಡೆಸಲು ಸಹಾಯಕವಾಗುವಂತೆ ಕೆಲಸ ಮಾಡಬೇಕಿದೆ. ಇಂಡಕ್ಷನ್ ಮತ್ತು ಮಧ್ಯಮ ಮಟ್ಟದ ತರಬೇತಿಗೆ ಏಕರೂಪದ ತರಬೇತಿ ಕಾರ್ಯಕ್ರಮ ಆರಂಭ ಮಾಡಿದಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳ ಅಧಿಕಾರಿಗಳನ್ನೊಳಗೊಂಡಂತೆ ಇತರ ಭಾರತೀಯ ಆಡಳಿತಾತ್ಮಕ ಸೇವೆಗಳಿಗೆ ಏಕರೀತಿಯ ಅರ್ಥ ಬರುತ್ತದೆ ಎಂದೂ ನಿರ್ಮಲಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಲವು ಸಂದರ್ಭಗಳಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸ್ಥಳೀಯ ಭಾಷೆ ತಿಳಿಯದೇ ಸ್ಥಳೀಯರು, ಅಧಿಕಾರಿಗಳು ಪರದಾಡುವ ಸ್ಥಿತಿ ಇದೆ. ಹಲವು ಬಾರಿ ಇದರಿಂದ ಸಂಘರ್ಷ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ನೇಮಕಾತಿ ಸಂದರ್ಭದಲ್ಲಿಯೇ ಅಭ್ಯರ್ಥಿಗಳು ಸ್ವಯಂಪ್ರೇರಿತ ಆಧಾರದಲ್ಲಿ ಪರಿಣಿತಿ ಹೊಂದಲು ಬಯಸುವ ಭಾಷೆಗಳನ್ನು ನಿರ್ಧರಿಸುವುದು ಮುಖ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಮಾತ್ರ ಗ್ರಾಹಕರು ಮತ್ತು ಬ್ಯಾಂಕ್ಗಳ ಅಂತರ ಕಡಿಮೆಯಾಗುವುದು ಸಾಧ್ಯವಾಗಲಿದೆ ಎಂದು ಸಚಿವೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.