ಬೆಂಗಳೂರು: ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನರರೋಗ, ಮಾನಸಿಕ ಒತ್ತಡ ಮೊದಲಾದ ಸಮಸ್ಯೆಗಳಿದ್ದಲ್ಲಿ, ಅದರ ನಿವಾರಣೆಗೆ ಪೂರಕವಾಗುವಂತೆ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಸರ್ಕಾರಿ ಸಾರಿಗೆ ಸಂಸ್ಥೆ ಬಿಎಂಟಿಸಿ ನಿಮ್ಹಾನ್ಸ್ ಜೊತೆಗೆ ಕೈ ಜೋಡಿಸಿದೆ.
ನಿಮ್ಹಾನ್ಸ್ನ ನಿರ್ದೇಶಕ ಗಂಗಾಧರ ಗುರುವಾ ಮತ್ತು ಬಿಎಂಟಿಸಿ ಅಧ್ಯಕ್ಷರಾದ ನಂದೀಶಾ ರೆಡ್ಡಿ ಅವರು ಉಭಯ ಸಂಸ್ಥೆಗಳ ಪರವಾಗಿ ಈ ಒಡಂಬಡಿಕೆಗೆ ಸಹಿ ಹಾಕಿದ್ದಾರೆ. ಮೂರು ವರ್ಷಗಳ ಅವಧಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದ್ದು, ಆ ಬಳಿಕ ಒಪ್ಪಂದ ಅವಧಿಯ ವಿಸ್ತರಣೆ ಅಥವಾ ನವೀಕರಣಕ್ಕೂ ಇದರಲ್ಲಿ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಎಂಟಿಸಿ ನೌಕರರ ಮಾನಸಿಕ ಸಮಸ್ಯೆ, ಮದ್ಯ ವ್ಯಸನ ಸೇರಿದಂತೆ ಇನ್ನಿತರ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ನಿಮ್ಹಾನ್ಸ್ ಈ ಒಪ್ಪಂದದ ಪ್ರಕಾರ ಅಧ್ಯಯನ ನಡೆಸಲಿದೆ. ಆದ್ಯತೆಯ ಮೇರೆಗೆ ಚಿಕಿತ್ಸೆ ನೀಡಲಾಗುತ್ತದೆ. ಹಾಗೆಯೇ ಸಬ್ಸಿಡಿಯಲ್ಲಿ ಚಿಕಿತ್ಸೆ ನೀಡುವ ಸಂಬಂಧವೂ ಪರಿಶೀಲನೆ ನಡೆಯುತ್ತಿದೆ ಎಂದು ಬಿಎಂಟಿಸಿ ನಿರ್ದೇಶಕ ಡಾ. ಅರುಣ್ ಕೆ ತಿಳಿಸಿದ್ದಾರೆ.
ಹಾಗೆಯೇ ವೈದ್ಯಕೀಯ ಸಂಸ್ಥೆಯಲ್ಲಿರುವ ವಿದ್ಯಾರ್ಥಿಗಳಿಗೆ ಸಬ್ಸಿಡಿಯಲ್ಲಿ ಪ್ರಯಾಣಕ್ಕೆ ಅನುಕೂಲ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿಯೂ ಈ ಒಪ್ಪಂದ ಮಹತ್ವ ಪಡೆದಿದೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.