ಲಕ್ನೋ: ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಗಮನವನ್ನು ಸೆಳೆಯುತ್ತಿವೆ. ಈ ಹಿನ್ನೆಲೆಯಲ್ಲಿ ಖಡಕ್ ಸಂದೇಶವನ್ನು ರವಾನೆ ಮಾಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ದುಷ್ಕರ್ಮಿಗಳಿಗೆ ಭವಿಷ್ಯ ನೆನಪಿಟ್ಟುಕೊಳ್ಳುವಂತಹ ಶಿಕ್ಷೆಯನ್ನು ನೀಡುವುದಾಗಿ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಯೋಗಿ ಆದಿತ್ಯನಾಥ ಅವರು, “ಉತ್ತರಪ್ರದೇಶದಲ್ಲಿ ತಾಯಂದಿರ ಹಾಗೂ ಸಹೋದರಿಯರ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವವರ ವಿನಾಶ ನಿಶ್ಚಿತವಾಗಿದೆ. ಇವರಿಗೆ ಭವಿಷ್ಯದಲ್ಲೂ ಉದಾಹರಣೆ ಆಗಬಲ್ಲ ಶಿಕ್ಷೆಯನ್ನು ನೀಡಲಾಗುವುದು. ನಮ್ಮ ಸರ್ಕಾರ ಮಹಿಳೆಯರ ಸುರಕ್ಷತೆ ಮತ್ತು ಪ್ರಗತಿಗೆ ಕಟಿಬದ್ಧವಾಗಿದೆ. ಇದು ನಮ್ಮ ವಚನ” ಎಂದಿದ್ದಾರೆ.
ಇತ್ತೀಚಿಗೆ ನಡೆದ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮಾತ್ರವಲ್ಲದೆ ಈ ಘಟನೆ ಯುಪಿಎ ಸರ್ಕಾರದ ಮೇಲೆ ಜನರು ಆಕ್ರೋಶಗೊಳ್ಳುವಂತೆ ಮಾಡಿದೆ.
उत्तर प्रदेश में माताओं-बहनों के सम्मान-स्वाभिमान को क्षति पहुंचाने का विचार मात्र रखने वालों का समूल नाश सुनिश्चित है।
इन्हें ऐसा दंड मिलेगा जो भविष्य में उदाहरण प्रस्तुत करेगा।
आपकी @UPGovt प्रत्येक माता-बहन की सुरक्षा व विकास हेतु संकल्पबद्ध है।
यह हमारा संकल्प है-वचन है।
— Yogi Adityanath (@myogiadityanath) October 2, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.