ಬೆಂಗಳೂರು: ರಾಜ್ಯದ ಎಲ್ಲಾ ರೈತರೂ ಜಾನುವಾರುಗಳ ರಕ್ಷಣೆಗೆ, ಪೋಷಣೆಗೆ ಮುಂದಾಗಬೇಕು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಆಕ್ಟೋಬರ್ 2 ರಿಂದ ತೊಡಗಿದಂತೆ 15 ನವೆಂಬರ್ ವರೆಗೆ ಮೊದಲ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಎಲ್ಲಾ ಕೃಷಿ ವಿಜ್ಞಾನ ಕೇಂದ್ರಗಳು, ಗ್ರಾ. ಪಂ., ಜಿ.ಪಂ. ಸಹಯೋಗದೊಂದಿಗೆ 11,453 ಲಕ್ಷ ಜಾನುವಾರುಗಳಿಗೆ ಈ ಲಸಿಕೆ ನೀಡಲಿದ್ದು, ಇದಕ್ಕಾಗಿ 6303 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಎಲ್ಲಾ ಅಧಿಕಾರಿಗಳಿಗೂ ಈಗಾಗಲೇ ಸೂಚನೆ ನೀಡಲಾಗಿದೆ. ಜೊತೆಗೆ ಯಾವುದೇ ರೀತಿಯಲ್ಲಿ ಕರ್ತವ್ಯ ಲೋಪವಾಗದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಚೌಹಾಣ್ ತಿಳಿಸಿದ್ದಾರೆ. ಜಾನುವಾರುಗಳ ಆರೋಗ್ಯ ಕಾಪಾಡುವಲ್ಲಿ ಈ ಲಸಿಕೆ ಮುಖ್ಯ ಪಾತ್ರ ವಹಿಸುತ್ತದೆ ಎಂದೂ ಅವರು ಹೇಳಿದ್ದಾರೆ. ಇದರಲ್ಲಿ ಲೋಪ ತೋರಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.