ನವದೆಹಲಿ: ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ಕುಡಿಯಲು ಯೋಗ್ಯವಾದ ಪೈಪ್ ನೀರು ಸರಬರಾಜು ಮಾಡುವ ಸಲುವಾಗಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಿನ್ನೆ 100 ದಿನಗಳ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
ಈ ಮಿಷನ್ ಅನ್ನು ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಗ್ರಾಮ ಪಂಚಾಯಿತಿಗಳಿಗೆ ‘ಮಾರ್ಗದರ್ಶಿಕಾ’ ಮತ್ತು ಜಲ ಜೀವನ್ ಮಿಷನ್ ಅನುಷ್ಠಾನಕ್ಕಾಗಿ ಪಾನಿ ಸಮಿತಿಗಳನ್ನು ಬಿಡುಗಡೆ ಮಾಡಿದ ವೇಳೆ ಮಾತನಾಡಿದ್ದ ಅವರು, ಈ ಸಾರ್ವಜನಿಕ ಸಂಸ್ಥೆಗಳಲ್ಲಿ ಕುಡಿಯಲು ಯೋಗ್ಯವಾದ ಪೈಪ್ ನೀರು ಸರಬರಾಜು ಮಾಡುವುದನ್ನು ಖಚಿತಪಡಿಸಿಕೊಳ್ಳಲು ಈ ಅಭಿಯಾನವನ್ನು ಉತ್ತಮವಾಗಿ ಬಳಸಿಕೊಳ್ಳುವಂತೆ ರಾಜ್ಯಗಳಿಗೆ ಮನವಿ ಮಾಡಿದ್ದರು.
ಮುಂದಿನ 100 ದಿನಗಳಲ್ಲಿ ಗ್ರಾಮದ ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳಲ್ಲಿ ಸುರಕ್ಷಿತ ನೀರು ಒದಗಿಸುವ ನಿರ್ಣಯವನ್ನು ಅಂಗೀಕರಿಸಲು ಜಲ್ ಜೀವನ್ ಮಿಷನ್ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗ್ರಾಮ ಸಭೆಗಳನ್ನು ಶೀಘ್ರದಲ್ಲಿಯೇ ಕರೆಯಲಾಗುತ್ತಿದೆ. ಈ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿ ಮತ್ತು ಅದರ ಉಪಸಮಿತಿ ನಿರ್ವಹಿಸಲಿದೆ. ಜಲ ಜೀವನ್ ಮಿಷನ್ 2024 ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೆ ಪೈಪ್ ನೀರಿನ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಾಚರಣೆಯು ಮಹಿಳೆಯರು ಮತ್ತು ಮಕ್ಕಳ ಮೇಲೆ ವಿಶೇಷ ಗಮನ ಹರಿಸಿದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.