ನವದೆಹಲಿ: ಕೇಂದ್ರ ಸರ್ಕಾರವು ಸಾಲದ ಕಂತು ಪಾವತಿ ವಿನಾಯಿತಿಗೆ ಘೋಷಿಸಿದ್ದ ಆರು ತಿಂಗಳ ಮೊರಟೋರಿಯಂ ಅವಧಿಯ ಚಕ್ರ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸುಪ್ರೀಂಕೋರ್ಟ್ಗೆ ತಿಳಿಸಿದೆ.
ರೂ. 2 ಕೋಟಿಗಿಂತ ಕಡಿಮೆ ಇರುವ ಎಂಎಸ್ಎಂಇ ಮತ್ತು ವೈಯಕ್ತಿಕ ಸಾಲಗಳಿಗೆ ಸಂಬಂಧಿಸಿದಂತೆ ಈ ಕ್ರಮ ಅನ್ವಯವಾಗಲಿದೆ ಎಂದೂ ಭಾರತ ಸರ್ಕಾರ ಮಾಹಿತಿ ನೀಡಿದೆ. ಕೊರೋನಾ ಸೋಂಕಿನಿಂದ ಉಂಟಾದ ಆರ್ಥಿಕ ಹಿಂಜರಿಕೆಯನ್ನು ಗಮನಿಸಿ ಆರ್ಬಿಐ ಈ ಹಿಂದೆ ಬ್ಯಾಂಕ್ಗಳಲ್ಲಿನ ಸಾಲದ ಕಂತು ಪಾವತಿ ಮುಂದೂಡಿಕೆಗೆ ಸಾರ್ವಜನಿಕರಿಗೆ ಅವಕಾಶ ನೀಡಿತ್ತು. ಆದರೆ ಈ ಸಂದರ್ಭದಲ್ಲಿ ಬಡ್ಡಿ ಮನ್ನಾ ಮಾಡುವಂತೆಯೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಈ ಆರ್ಜಿಗೆ ಸಂಬಂಧಿಸಿದಂತೆ ಕೋರ್ಟ್ಗೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದ್ದು, ಆ ಮೂಲಕ ಸಾಲಗಾರರಿಕೆ ಕೊಂಚ ಮಟ್ಟಿನ ನಿರಾಳತೆಯನ್ನು ಒದಗಿಸಿದೆ. ಎಂಎಸ್ಎಂಇ, ಶಿಕ್ಷಣ, ವಸತಿ, ಆಟೋ, ಗ್ರಾಹಕ, ಕ್ರೆಡಿಟ್ ಕಾರ್ಡ್ ಬಾಕಿ ಮತ್ತು ಬಳಕೆ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಚಕ್ರ ಬಡ್ಡಿಯನ್ನು ಮನ್ನಾ ಮಾಡುವ ಬಗೆಗೂ ಈ ಅಫಿಡವಿಟ್ನಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಆರು ತಿಂಗಳ ಅವಧಿಯ ಬಡ್ಡಿ ಮನ್ನಾ ಮಾಡಲು ಚಿಂತನೆ ನಡೆಸಿರುವುದಾಗಿಯೂ ಅದು ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.