ನವದೆಹಲಿ: ಕುವೈಟ್ ರಾಜ ಶೇಖ್ ಸಬಾ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾ ನಿಧನರಾದ ಹಿನ್ನೆಲೆಯಲ್ಲಿ ಇಂದು ಭಾರತದಲ್ಲಿ ಒಂದು ದಿನಗಳ ಶೋಕಾಚರಣೆಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಗೃಹ ವ್ಯವಹಾರ ಸಚಿವಾಲಯ ಶನಿವಾರ ಮಾಹಿತಿಯನ್ನು ನೀಡಿದೆ.
ಕುವೈಟ್ ರಾಜ ಶೇಖ್ ಸಬಾ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾ ಸೆಪ್ಟೆಂಬರ್ 29 ರಂದು ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗೌರವದ ಸಂಕೇತವಾಗಿ, ಒಂದು ದಿನದ ಶೋಕಾಚರಣೆ ಇರುತ್ತದೆ ಎಂದು ಭಾರತ ಸರ್ಕಾರ ಹೇಳಿದೆ. ಅಕ್ಟೋಬರ್ 4 ರಂದು ಭಾರತದಾದ್ಯಂತ ಶೋಕಾಚರಣೆ ನಡೆಸಲಾಗುವುದು ಎಂದು ಎಂಎಚ್ಎ ಪ್ರಕಟಣೆಯಲ್ಲಿ ತಿಳಿಸಿದೆ.
ಶೋಕಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರ ಧ್ವಜವನ್ನು ಭಾರತದಾದ್ಯಂತ ಅರ್ಧದಷ್ಟು ಮಾತ್ರ ಹಾರಿಸಲಾಗುತ್ತದೆ ಮತ್ತು ಇಂದು ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮ ಇರುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಶೇಖ್ ಸಬಾ ಅಲ್-ಅಹ್ಮದ್ ಅಲ್-ಸಬಾ ಅವರು ಅಮೆರಿಕಾದ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಅವರ ವಯಸ್ಸು 91 ಆಗಿತ್ತು.
ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರೀತಿಯ ನಾಯಕ ಮತ್ತು ಭಾರತದ ಆಪ್ತ ಸ್ನೇಹಿತ ಎಂದು ಅವರನ್ನು ಬಣ್ಣಿಸಿದ್ದಾರೆ. “ದಿವಂಗತ ನಾಯಕ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಕುವೈಟ್ನಲ್ಲಿರುವ ಭಾರತೀಯ ಸಮುದಾಯದ ಬಗ್ಗೆ ಯಾವಾಗಲೂ ವಿಶೇಷ ಕಾಳಜಿ ವಹಿಸುತ್ತಿದ್ದರು” ಎಂದು ಪಿಎಂ ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.