ಲಕ್ನೋ: ದೇಶದಲ್ಲೇ ಸಂಚಲನ ಮೂಡಿಸಿದ್ದ ಹತ್ರಾಸ್ ಅತ್ಯಾಚಾರ ಮತ್ತು ಅಂತ್ಯಕ್ರಿಯೆ ವಿವಾದ ಪ್ರಕರಣವನ್ನು ಉತ್ತರ ಪ್ರದೇಶದ ಯೋಗಿ ಸರ್ಕಾರ ಸಿಬಿಐಗೆ ಒಪ್ಪಿಸುವುದಾಗಿ ಘೋಷಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಟ್ ತನಿಖೆ ಪೂರ್ಣವಾಗಿದ್ದು, ಯೋಗಿ ಸರ್ಕಾರ ಈ ಗಂಭೀರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಮಹತ್ವದ ನಿರ್ಣಯಕ್ಕೆ ಬಂದಿದೆ. ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 14 ರ ಒಳಗಾಗಿ ಸಿಟ್ ತನಿಖಾ ವರದಿಯನ್ನು ನೀಡುವಂತೆಯೂ ಆದೇಶಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಡ್ರಾಮಾ ನಡೆಸಿ ಯೋಗಿ ಸರ್ಕಾರದ ವಿರುದ್ಧ ದನಿಯೆತ್ತಿತ್ತು. ಪ್ರತಿಭಟನೆಗಳೂ ನಡೆದಿದ್ದವು. ಅಲ್ಲದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಹತ್ರಾಸ್ಗೆ ತೆರಳುವುದಕ್ಕೂ ಯೋಗಿ ಸರ್ಕಾರ ಅವಕಾಶ ನೀಡಿದೆ. ಜೊತೆಗೆ ಸಂತ್ರಸ್ಥ ಕುಟುಂಬವನ್ನು ಭೇಟಿಯಾಗಲು ಮಾಧ್ಯಮಗಳಿಗೂ ಅವಕಾಶ ಮಾಡಿಕೊಟ್ಟಿದೆ. ಜೊತೆಗೆ ಬಹುಜನ ಬೇಡಿಕೆಯಂತೆ ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಮೂಲಕ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೂರಕ ನಿರ್ಧಾರ ತೆಗೆದುಕೊಂಡಿದೆ.
ಇನ್ನು ಈ ಸಂಬಂಧ ಮಾಹಿತಿ ನೀಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಅತ್ಯಾಚಾರ ಪಾತಕಿಗಳಿಗೆ ದೇಶದಲ್ಲಿಯೇ ಇನ್ನು ಮುಂದೆ ಅತ್ಯಾಚಾರದಂತಹ ದುಷ್ಕೃತ್ಯಗಳಲ್ಲಿ ತೊಡಗುವ ಪಾಪಿಗಳು ಹಿಂದೇಟು ಹಾಕುವಂತಹ ಕಠಿಣ ಶಿಕ್ಷೆ ನೀಡುವ ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರದಲ್ಲಿ ತಾಯಂದಿರ ಸುರಕ್ಷತೆಗೆ ಮೊದಲ ಆದ್ಯತೆ ಎಂದೂ ಯೋಗಿ ಹೇಳಿದ್ದಾರೆ.
ವಿಪಕ್ಷಗಳು ಈ ಪ್ರಕರಣವನ್ನು ರಾಜಕೀಯ ಪ್ರೇರಿತವಾಗಿ, ಕಾಂಗ್ರೆಸ್ ಆಡಳಿತದ ರಾಜಸ್ಥಾನದಲ್ಲಿ ನಡೆದ ಅತ್ಯಾಚಾರದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಮೌನ ವಹಿಸಿರುವುದೇ ಇದಕ್ಕೆ ಸಾಕ್ಷಿ. ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಮಾತನಾಡುವ ಕಾಂಗ್ರೆಸ್ ಅವರದ್ದೇ ಪಕ್ಷದ ಆಳ್ವಿಕೆಯ ರಾಜ್ಯದಲ್ಲಿ ನಡೆದ ದುರ್ಘಟನೆ ಬಗ್ಗೆ ಸೊಲ್ಲೆತ್ತದಿರುವುದು ದುರಂತ ಎಂದೂ ಬಿಜೆಪಿ ಅಭಿಪ್ರಾಯ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.