ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ರೈತ ಮಸೂದೆಗಳ ವಿರುದ್ಧ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಪ್ರತಿಪಕ್ಷಗಳ ಈ ಕಾರ್ಯಕ್ಕೆ ಸೆಡ್ಡು ಹೊಡೆಯಲು ಮುಂದಾಗಿರುವ ಬಿಜೆಪಿ ಟ್ರ್ಯಾಕ್ಟರ್ ಪೂಜೆ ಮತ್ತು ಸಮಾವೇಶಗಳನ್ನು ಆಯೋಜಿಸಲು ನಿರ್ಧರಿಸಿದೆ.
ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದ ವೇಳೆ ಕಾಂಗ್ರೆಸ್ಸಿಗರು ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿ ಅನಾಗರಿಕ ಕೃತ್ಯ ಎಸಗಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಟ್ರ್ಯಾಕ್ಟರ್ ಪೂಜೆಯನ್ನು ನಡೆಸಲು ಸಜ್ಜಾಗಿದೆ.
ಬಿಜೆಪಿ ಅಭಿಯಾನವು ಅಕ್ಟೋಬರ್ 15 ರವರೆಗೆ 365 ಹಳ್ಳಿಗಳನ್ನು ಒಳಗೊಳ್ಳಲಿದ್ದು, ಸಿದ್ಧತೆ ನಡೆಯುತ್ತಿದೆ. ಮೋದಿ ಸರ್ಕಾರದ ಇತ್ತೀಚೆಗೆ ಜಾರಿಗೆ ಬಂದ ಕೃಷಿ ಮಸೂದೆಗಳ ಬಗ್ಗೆ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ರೈತರನ್ನು ಹೇಗೆ ದಾರಿ ತಪ್ಪಿಸುತ್ತಿವೆ ಎಂಬುದನ್ನು ಜನರಿಗೆ ತಿಳಿಸುವ ಅಭಿಯಾನದ ಪ್ರಮುಖ ಭಾಗವಾಗಿ ಟ್ರಾಕ್ಟರ್ ಪೂಜೆಗಳು ಮತ್ತು ಟ್ರ್ಯಾಕ್ಟರ್ ರ್ಯಾಲಿಗಳು ನಡೆಯಲಿವೆ ಎಂದು ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕನ್ವೀನರ್ ಕುಲ್ಜೀತ್ ಚಹಲ್ ಹೇಳಿದ್ದಾರೆ.
ಟ್ರಾಕ್ಟರ್ ಪೂಜೆಗಳು ಮತ್ತು ರ್ಯಾಲಿಗಳನ್ನು ನಡೆಸುವ ಮೂಲಕ ಟ್ರಾಕ್ಟರುಗಳು ರೈತರ ಸಮೃದ್ಧಿಯ ಮೂಲವೆಂದು ನಾವು ಕಾಂಗ್ರೆಸ್ಸಿಗರಿಗೆ ಮನದಟ್ಟು ಮಾಡಿಕೊಡುತ್ತೇವೆ ಎಂದು ಚಹಲ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.