ನವದೆಹಲಿ: ಗೋರ್ಖಾಲ್ಯಾಂಡ್ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯ ಅಕ್ಟೋಬರ್ 7 ರಂದು ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಸಿದ್ಧವಾಗಿದೆ ಎಂದು ವರದಿಗಳು ತಿಳಿಸಿವೆ.
ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಯನ್ನೂ ಆಹ್ವಾನಿಸಲಾಗಿದೆ.
ಈ ಬೆಳವಣಿಗೆಗೆ ಕಾಂಗ್ರೆಸ್ ಮತ್ತು ಎಡಪಕ್ಷಗಳು ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಿವೆ. ಈ ನಡೆ ಪ್ರತ್ಯೇಕತಾವಾದಿ ನಿಲುವನ್ನು ಪೋಷಿಸುತ್ತದೆ ಎಂದಿದೆ.
ಆದರೆ ಆರೋಪಗಳನ್ನು ಅಲ್ಲಗೆಳೆದಿರುವ ಬಿಜೆಪಿ, ಪ್ರತ್ಯೇಕ ರಾಜ್ಯದ ಕುರಿತು ಈ ಸಭೆಯನ್ನು ನಡೆಸಲಾಗುತ್ತಿಲ್ಲ, ಬದಲಿಗೆ ಡಾರ್ಜಿಲಿಂಗ್ ಮತ್ತು ಇತರ ಬೆಟ್ಟ ಪ್ರದೇಶಗಳ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲು ಸಭೆ ಕರೆಯಲಾಗಿದೆ ಎಂದಿದೆ.
ಡಾರ್ಜಿಲಿಂಗ್ ಅನ್ನು ಪ್ರತ್ಯೇಕ ರಾಜ್ಯವಾಗಿ ಮಾಡುವ ಬಹುದಿನಗಳ ಬೇಡಿಕೆಯ ಹಿನ್ನಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ಪ್ರಸ್ತುತ, ಡಾರ್ಜಿಲಿಂಗ್ ಸ್ವಾಯತ್ತ ಅಭಿವೃದ್ಧಿ ಸಂಸ್ಥೆಯನ್ನು ಹೊಂದಿದೆ, ಇದು ಕೇಂದ್ರ, ರಾಜ್ಯ ಮತ್ತುಗೋರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ನಡುವಿನ ತ್ರಿಪಕ್ಷೀಯ ಒಪ್ಪಂದದಡಿಯಲ್ಲಿ ರೂಪುಗೊಂಡಿದೆ, ಇದು ಈ ಪ್ರದೇಶದ ಪ್ರಮುಖ ರಾಜಕೀಯ ಶಕ್ತಿಯಾಗಿದೆ. ಗೃಹ ಸಚಿವಾಲಯ ಕರೆದ ಸಭೆಗೆ ಜಿಜೆಎಂ ಅಧ್ಯಕ್ಷರನ್ನು ಆಹ್ವಾನಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.