ತಿರುವನಂತಪುರ: ನೆರೆಯ ರಾಜ್ಯ ಕೇರಳದ ಕಮ್ಯೂನಿಸ್ಟ್ ಸರ್ಕಾರ ಸದಾ ಒಂದಿಲ್ಲೊಂದು ಹಿಂದೂ ವಿರೋಧಿ ನೀತಿಗಳನ್ನು ಜಾರಿಗೆ ತರುವುದು ಆಶ್ಚರ್ಯಕರ ವಿಚಾರವಲ್ಲ. ಈಗ ಇಂತಹದ್ದೇ ಒಂದು ನಿಲುವನ್ನು ವಿದ್ಯಾರ್ಥಿಗಳ ಮೇಲೆ ಹೇರಲು ಕೇರಳ ಸರ್ಕಾರ ಸಿದ್ಧವಾಗಿದೆ.
ಕೇರಳದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ರಕ್ಷಾ ಬಂಧನ ಆಚರಣೆ ಮಾಡದಂತೆ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ರಾಮ್ಲಾ ಬೀವಿ ಈ ಆದೇಶವನ್ನು ಹೊರಡಿಸಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ರಕ್ಷಾ ಬಂಧನ ಆಚರಣೆ ಮಾಡುವಂತಿಲ್ಲ ಎಂದು ಈ ಆದೇಶದಲ್ಲಿ ತಿಳಿಸಿದ್ದಾರೆ.
ಅಲ್ಲಿನ ಸರ್ಕಾರ ಮತ್ತು ಶಿಕ್ಷಣ ಸಚಿವಾಲಯದ ಆದೇಶದನ್ವಯ ಈ ನೀತಿಯನ್ನು ಜಾರಿಗೆ ತರಲಾಗಿದೆ. ಅದರಂತೆ ಕೇರಳದ ಯಾವುದೇ ಸರ್ಕಾರಿ ವೈದ್ಯಕೀಯ, ನರ್ಸಿಂಗ್, ದಂತವೈದ್ಯಕೀಯ ಕಾಲೇಜುಗಳಲ್ಲಿ ರಕ್ಷಾ ಬಂಧನ ಆಚರಣೆಗೆ ಅನುಮತಿ ಇಲ್ಲ ಎಂದು ತಿಳಿಸಿದೆ. ಈ ಆದೇಶಕ್ಕೆ ಸಂಬಂಧಿಸಿದಂತೆ ಡಾ. ರಾಮ್ಲಾ ಬೀವಿ ಹೇಳಿಕೆ ನೀಡಿದ್ದು, ಇದು ಹಿಂದೂ ಧರ್ಮದ ಆಚರಣೆಯಾಗಿದೆ. ಆದ್ದರಿಂದ ನಿಷೇಧ ಮಾಡಿರುವುದಾಗಿಯೂ ಹೇಳಿದ್ದಾರೆ.
ದೇಶದಲ್ಲಿ ಈ ಹಬ್ಬವನ್ನು ರಾಷ್ಟ್ರಪತಿಗಳಿಂದ ಹಿಡಿದೂ ಎಲ್ಲರೂ ಆಚರಣೆ ಮಾಡುತ್ತಿದ್ದಾರೆ. ಆದರೆ ಕೇರಳ ಸರ್ಕಾರ ಮಾತ್ರ ಇದನ್ನು ಒಂದು ಧರ್ಮಕ್ಕೆ ಸೀಮಿತ ಮಾಡುವ ಮೂಲಕ ತನ್ನ ಅಲ್ಪತನವನ್ನು ಜಾಹೀರು ಮಾಡಿದೆ.
ಕಳೆದ ವರ್ಷ ಕೇರಳದ ಕಾಲೇಜುಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳು ರಕ್ಷಾ ಬಂಧನ ಆಚರಣೆ ಮಾಡಿದ್ದರು. ಈ ಬಾರಿ ಈ ಅವಕಾಶವನ್ನು ತಡೆಯುವ ಹಿನ್ನೆಲೆಯಲ್ಲಿ ಕೇರಳ ಎಡಚರ ಸರ್ಕಾರ ಇಂತಹ ನಿಲುವನ್ನು ಪ್ರದರ್ಶನ ಮಾಡಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.